ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಕದಂಬ ನೌಕಾನೆಲೆ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳನ್ನು ಮನೆಯೊಳಗೆ ಇರುವಂತೆ ಎಚ್ಚರಿಕೆ ನೀಡಲಾಗಿದೆ.
ವಿಡಿಯೋದಲ್ಲಿ ಆರ್ಗಾದಲ್ಲಿರುವ ನೌಕಾಪಡೆ ಸಿಬ್ಬಂದಿ ವಸತಿ ನಿಲಯದ ಬಳಿ ಚಿರತೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ, ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಆದರೆ, ಯಾವುದೇ ಆಪಾಯಗಳು ಸಂಭವಿಸಿರಲಿಲ್ಲ.
ಚಿರತೆಯ ಜೊತೆಗೆ ಕಾಡುಹಂದಿಗಳು ಮತ್ತು ಇತರ ಪ್ರಾಣಿಗಳು ಕೂಡ ಕಾಣಿಸಿಕೊಂಡಿತ್ತು. ಸದ್ಯ ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ, ಸ್ಥಳೀಯ ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸಲಹೆ ನೀಡಿದೆ.
ಇದನ್ನೂ ಓದಿ : ಹಾವೇರಿ | ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು!



















