ಆನೇಕಲ್ : ಲೈಂಗಿಕ ದೌರ್ಜನ್ಯಕ್ಕೊಳಗಾಗಿ ದೂರು ನೀಡಲು ಬಂದರೇ ಅವಳ ವಿರುದ್ದವೇ ಪೋಲಿಸರು ಎಫ್ಐಆರ್ ದಾಖಲಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಹಣದಾಸೆಗೆ ಪೊಲೀಸರು ಶಾಮೀಲಾಗಿದ್ದಾರೆಂದು ಆರೋಪ ಕೇಳಿಬಂದಿದ್ದು, ನ್ಯಾಯ ದೊರಕಿಸಿ ಕೊಡಿ ಎಂದು ಸಂತ್ರಸ್ತೆ ಅಂಗಲಾಚಿ ಬೇಡಿಕೊಳ್ಳುತ್ತಿದ್ದಾಳೆ.
ಸ್ಕ್ಯಾನಿಂಗ್ ಸೆಂಟರ್ನಲ್ಲಿ ರೆಡಿಯಾಲಜಿಸ್ಟ್ ಜಯಕುಮಾರನು ಲೈಂಗಿಕ ದೌರ್ಜನ್ಯ ವೆಸಗಿದ್ದಾನೆ. ದೌರ್ಜನ್ಯ ನಡೆಸಿರುವ ವಿಡಿಯೋ ಸಾಕ್ಷಿ ಕೂಡ ನನ್ನಬಳಿ ಇದೆ ಎಂದು ಯುವತಿ ಹೇಳಿದ್ದು, ಪೊಲೀಸರು ಠಾಣೆಗೆ ಬಂದ ಆರೋಪಿ ಜಯಕುಮಾರನನ್ನು ಬಂಧಿಸದೆ ಬಿಟ್ಟು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾಳೆ.
ಸದ್ಯ ಕರವೇ ಮತ್ತು ಸಾರ್ವಜನಿಕರ ಹೋರಾಟದ ಬಳಿಕ ಆರೋಪಿ ಬಂಧಿಸಲಾಗಿದೆ. ಇದಾದ ಬಳಿಕ ಆರೋಪಿ ಪತ್ನಿಯು ಸಂತ್ರಸ್ತೆ ಹನಿಟ್ರಾಪ್, ರೋಲ್ ಕಾಲ್ ಮಾಡಲು ಬಂದಿದ್ದರು ಎಂದು ದೂರು ನೀಡಿದ್ದು, ಬಳಿಕ ಪೋಲಿಸರು ಸಂತ್ರಸ್ತೆ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಇದೀಗ ಆರೋಪಿಗಳೊಂದಿಗೆ ಪೊಲೀಸರು ಶಾಮಿಲಾಗಿ ತಾನು ನೀಡಿದ ಕೇಸ್ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತನಿಖಾಧಿಕಾರಿ ಪೊಲೀಸ್ ಇನ್ಸ್ ಪೆಕ್ಟರ್ ತಿಪ್ಪೆಸ್ವಾಮಿಯನ್ನ ಬದಲಾಯಿಸಬೇಕು, ಇಲ್ಲವಾದಲ್ಲಿ ಸಂತ್ರಸ್ತೆ ನೀಡಿದ ದೂರು ಹಳ್ಳ ಹಿಡುತ್ತದೆ. ಮೇಲಾಧಿಕಾರಿಗಳು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಬೇಕು ಎಂದು ಸಂತ್ರಸ್ತೆ ಕಡೆಯವರು ಮತ್ತು ನೆಟ್ಟಿಗರು ಆಕ್ರೋಶಿಸುತ್ತಿದ್ದಾರೆ.
ಇದನ್ನೂ ಓದಿ : ಗೋವಾ ನೈಟ್ ಕ್ಲಬ್ನಲ್ಲಿ ಬೆಂಕಿ ಅವಘಡ | 23 ಜನ ದಾರುಣ ಸಾವು



















