ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭಕ್ಕೂ ಮೊದಲು ಸಿಎಂ ಹಾಗೂ ಪ್ರತಿಪಕ್ಷ ನಾಯಕ ಅಶೋಕ್, ಸುನೀಲ್ ಕುಮಾರ್ ಮುಖಾಮುಖಿಯಾದರು. ಈ ವೇಳೆ ಮಾತನಾಡಿದ ಸಿಎಂ, ಆರ್. ಅಶೋಕ್ ಅವರನ್ನು ಏನ್ ಸಣ್ಣ ಆಗಿದ್ದೀಯಾ? ಎಂದು ನಗು ನಗುತ್ತಾ ಕೇಳಿದರು. ಅದಕ್ಕೆ ಪ್ರತಿಯಾಗಿ ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ ಸರ್ ಎಂದು ಉತ್ತರಿಸಿದ್ದಾರೆ.

ಅಧಿವೇಶನಕ್ಕೂ ಮೊದಲು ಸ್ಪೀಕರ್ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕ ಅಶೋಕ್, ಸುನೀಲ್ ಕುಮಾರ್ ಮುಖಾಮುಖಿಯಾದಾಗ ಸಕಾರಾತ್ಮಕ ಮಾತುಕತೆ ನಡೆದಿದೆ.
ಈ ವೇಳೆ ಸಿದ್ದರಾಮಯ್ಯನವರಿಗೆ ಕೈಕುಲುಕಿ ವಿಪಕ್ಷ ನಾಯಕರು ಶುಭ ಕೋರಿದ್ದಾರೆ. ಈ ವೇಳೆ ಸಿಎಂ, ನಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಾಡ್ತೀರೇನಪ್ಪಾ ಎಂದು ನಗುನಗುತ್ತಲೇ ಕಿಚಾಯಿಸಿದರು. ಇದಕ್ಕೆ ಇಬ್ಬರು ನಾಯಕರು ಯಾವುದೇ ಉತ್ತರ ನೀಡದೇ ನಕ್ಕಿದರು.
ಇದನ್ನೂ ಓದಿ : ಚುನಾವಣಾ ಅಕ್ರಮ ಆರೋಪ | ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್.. ಸುಪ್ರೀಂಕೋರ್ಟ್ನಿಂದ ನೋಟಿಸ್!



















