ಬೆಂಗಳೂರು: ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚೋದಿಲ್ಲ ಅಂತ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ.
ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ ಕೇಳಿದರು. ಕೆಪಿಎಸ್ ಶಾಲೆಗಳ ಅಭಿವೃದ್ಧಿ ಪೇಪರ್ ಮೇಲಿವೆ. ಇವತ್ತಿನ ಶಿಕ್ಷಣ ಸಚಿವರು ಶಿಕ್ಷಣ ವ್ಯವಸ್ಥೆ ಬುಡಮೇಲು ಮಾಡಲು ಮುಂದಾಗಿದ್ದಾರೆ ಅನ್ನಿಸುತ್ತಿದೆ ಎಂದಿದ್ದಾರೆ.
ಗ್ರಾಮ ಪಂಚಾಯತಿಗೆ ಒಂದು ಶಾಲೆ ಮಾಡಿ ಸರ್ಕಾರ ಶಾಲೆಗಳನ್ನು ಮುಚ್ಚೋ ಹುನ್ನಾರ ಮಾಡ್ತಿದೆ. ಕೆಪಿಎಸ್ ಶಾಲೆಗಳಿಗೆ ಹಳೆ ಕಟ್ಟಡ ಬೇಡ, ಹೊಸ ಕ್ಯಾಂಪ್ ನಿರ್ಮಾಣ ಮಾಡಬೇಕು. ಒಂದು ಗ್ರಾಮಕ್ಕೆ ಒಂದು ಪ್ರಾಥಮಿಕ ಶಾಲೆ ಇರಬೇಕು. ಸರ್ಕಾರಿ ಶಾಲೆ ಮುಚ್ಚಬೇಡಿ. ಕೆಪಿಎಸ್ ಶಾಲೆಯನ್ನ 6 ರಿಂದ 12ನೇ ತರಗತಿಗೆ ಮಾಡಿ. ಪ್ರಾಥಮಿಕ ಶಾಲೆಗಳು ಪ್ರತಿ ಗ್ರಾಮದಲ್ಲಿ ಇರಲಿ ಎಂದು ಚಿದಾನಂದಗೌಡ ಒತ್ತಾಯಿಸಿದ್ದಾರೆ.
ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ನಾನು ಯಾವುದೇ ಶಾಲೆ ಮುಚ್ಚುತ್ತೇನೆ ಅಂತಾ ಹೇಳಿಲ್ಲ. ಕೆಪಿಎಸ್ ಶಾಲೆಯಲ್ಲಿ ಸ್ಕೂಲ್ ವ್ಯಾನ್ ಕೊಡ್ತೀವಿ. 6 ರಿಂದ 12ನೇ ತರಗತಿಗೆ ಮಾತ್ರ ಕೆಪಿಎಸ್ ಮಾಡೋಕೆ ಆಗಲ್ಲ. ಉತ್ತಮ ಶಾಲೆ ಇರೋ ಕಡೆ ಕೆಪಿಎಸ್ ಶಾಲೆ ಮಾಡ್ತಾ ಇದ್ದೇವೆ. ನಮ್ಮ ಸಮಾಜ ಹಾಳು ಮಾಡ್ತಿರೋದು ಸೋಶಿಯಲ್ ಮೀಡಿಯಾ. ನಾನು ಕನ್ನಡ ಶಾಲೆ ಮುಚ್ಚುತ್ತೇನೆ ಎಂದು ಹೇಳಿಲ್ಲ. ಒಬ್ಬ ಮಗು ಇದ್ದರೂ, ಒಂದು ಟೀಚರ್ ಇರ್ತಾರೆ. ನಮ್ಮ ಸರ್ಕಾರ ಯಾವುದೇ ಶಾಲೆ ಮುಚ್ಚಲ್ಲ. ನಮ್ಮ ರಕ್ತದಲ್ಲಿ ಕನ್ನಡ ಇದೆ. ಮಕ್ಕಳು ಶಾಲೆಗೆ ಬರೋದು ಇದ್ದರೆ ಹೊಸ ಶಾಲೆ ಕೊಡ್ತೀನಿ ಎಂದಿದ್ದಾರೆ.
ಇದನ್ನೂ ಓದಿ : “ಅಮೆರಿಕದ ಕನಸನ್ನೇ ಕದಿಯುತ್ತಿರುವ ವಲಸಿಗರು” ಎಂದ ಜೆ.ಡಿ. ವ್ಯಾನ್ಸ್ ; ಪತ್ನಿ ಉಷಾರನ್ನು ಭಾರತಕ್ಕೆ ಕಳುಹಿಸಿ ಎಂದ ನೆಟ್ಟಿಗರು!



















