ಉಡುಪಿ: ಪರ್ಯಾಯ ಪುತ್ತಿಗೆ ಮಠದ ಸಮಾರೋಪ ಸಮಾರಂಭದ ವೇಳೆ ಡಿಸೆಂಬರ್ 27ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೃಷ್ಣಮಠಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ವರ್ಣಮಯ ಪಾರ್ಥಸಾರಥಿ ರಥ ಸಮರ್ಪಣಾ ಮಹೋತ್ಸವದಲ್ಲಿ ಅಭ್ಯಾಗತರಾಗಿ ಭಾಗಿಯಾವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಲಕ್ಷ್ಮಿ ನಗರದ ಅವರ ನಿವಾಸದಲ್ಲಿ ಮಠದ ವತಿಯಿಂದ ಆಮಂತ್ರಿಸಲಾಯಿತು.
ಇತ್ತೀಚಿಗೆ ಪ್ರಧಾನಮಂತ್ರಿ ಮೋದಿ ಭಾಗವಹಿಸಿ ಅತ್ಯಂತ ಯಶಸ್ವಿಯಾದ ಲಕ್ಷ ಕಂಠ ಗೀತಾ ಪಾಠಾಯಣ ಕಾರ್ಯಕ್ರಮದ ಬಗ್ಗೆ ವಿಚಾರಿಸಿ ಯೋಗೀಜಿ ಸಂತಸ ಪಟ್ಟರು.
ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಶ್ರೀ ಪ್ರಸನ್ನಾಚಾರ್ಯ ಹಾಗೂ ಜನಪ್ರಿಯ ಹಿರಿಯ ಪತ್ರಕರ್ತ ಶ್ರೀ ರವೀಂದ್ರ ಜೋಶಿಯವರು ಕಾರ್ಯಕ್ರಮದ ಮಾಹಿತಿಯನ್ನು ಆದಿತ್ಯನಾಥ್ ಅವರಿಗೆ ನೀಡಿದರು. ಯೋಗಿಯವರು ಇಷ್ಟರಲ್ಲಿಯೇ ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಕೃಷ್ಣಮಠದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ‘ಸರ್ಕಾರಿ ಕೆಲಸ ಸಿಗ್ತಾ ಇಲ್ಲ’ | ಮನನೊಂದ ಯುವತಿ ರೈಲು ಹಳಿಗೆ ಹಾರಿ ಆತ್ಮಹತ್ಯೆ



















