ಚಿತ್ರದುರ್ಗ : ಗಂಡ-ಹೆಂಡತಿ ನಡುವೆ ವೈಮನಸ್ಸು ಉಂಟಾಗಿ ಜಗಳ ಸಂಭವಿಸಿದ್ದು, ಇದರಿಂದ ಮನನೊಂದು 2 ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಕಾಟೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುಷ್ಪ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ. ಹರೀಶ್ ಮತ್ತು ಪುಷ್ಪ ದಂಪತಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ನಿನ್ನೆ ರಾತ್ರಿ ಪತಿ ಹರೀಶ್ ಜೊತೆ ಜಗಳವಾಡಿದ ಈಕೆ ಬೆಳಗಿನ ಜಾವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದೀಗ ಮೃತ ಪುಷ್ಪ ಕುಟುಂಬಸ್ಥರು ಪತಿ ಹರೀಶ್ ವಿರುದ್ದ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳಕ್ಕೆ ಚಿತ್ರದುರ್ಗ ಮಹಿಳಾ ಠಾಣಾ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಹಾಸನ | ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ



















