ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದರು.

ಈ ಹೇಳಿಕೆ ನೀಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ. ಇದೀಗ ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ 15 ಇನ್ಸ್ಟಾಗ್ರಾಂ ಖಾತೆ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳು ವಿಜಯಲಕ್ಷ್ಮಿ ಅವರನ್ನು ಮಾತನಾಡಲು ಪ್ರಯತ್ನಿಸಿದೆ. ಆದರೆ, ವಿಜಯಲಕ್ಷ್ಮಿ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಕಾರು ಹತ್ತಿ ತೆರಳಿದ್ದಾರೆ.
ಇದನ್ನೂ ಓದಿ ; ರಶ್ಮಿಕಾ ಮಂದಣ್ಣ ‘ಮೈಸಾ’ ಉಗ್ರರೂಪ..!



















