ರಾಮನಗರ | ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಹಾಗೂ ನಗರಸಭೆ ಅಧ್ಯಕ್ಷರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.
ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರ ಎದುರೇ ಈ ಘಟನೆ ನಡೆದಿರುವುದು ವಿಶೇಷ. ರಾಮನಗರಕ್ಕೆ ರೈಲ್ವೆ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ್ದ ಸಚಿವ ವಿ. ಸೋಮಣ್ಣ ಅವರ ಎದುರಲ್ಲೇ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹಾಗೂ ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ನಡುವೆ ಮಾತಿನ ಜಟಾಪಟಿ ಆರಂಭವಾಯಿತು.
ಕೆಲಕಾಲ ಇಬ್ಬರ ನಡುವಿನ ವಾಗ್ವಾದ ತೀವ್ರಗೊಂಡಿತು. ಪರಿಸ್ಥಿತಿ ಕೈ ಮೀರುವ ಲಕ್ಷಣ ಕಾಣುತ್ತಿದ್ದಂತೆಯೇ ಸಚಿವ ವಿ. ಸೋಮಣ್ಣ ಮಧ್ಯ ಪ್ರವೇಶಿಸಿ ನಗರಸಭೆ ಅಧ್ಯಕ್ಷರನ್ನು ಸಮಾಧಾನಪಡಿಸಿದರು.
ಇದನ್ನೂ ಓದಿ : ಸಹೋದ್ಯೋಗಿಗೆ ಲಿಫ್ಟ್ ಕೊಡುವ ನೆಪದಲ್ಲಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ | ಐಟಿ ಕಂಪನಿ ಸಿಇಒ ಸೇರಿ ಮೂವರು ಅರೆಸ್ಟ್



















