ಬೆಂಗಳೂರು: ಚಿತ್ರದುರ್ಗ ಸ್ಲೀಪರ್ ಬಸ್ ದುರಂತದ ಬೆನ್ನಲ್ಲೇ ಇದೀಗ ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಮತ್ತೊಂದು ಸ್ಲೀಪರ ಬಸ್ ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಠವಶಾತ್ ಹೆಚ್ಚಿನ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ..
ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಚೆನ್ನೈ ಕಡೆ ಹೊರಟಿದ್ದ ಸ್ಲೀಪರ್ ಬಸ್ ಫ್ಲೈಓವರ್ ಮೇಲೆ ಓವರ್ ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎದುರಿಗಿದ್ದ ಮತ್ತೊಂದು ಸ್ಲೀಪರ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ನಡೆದಿಲ್ಲ ಎನ್ನಲಾಗುತ್ತಿದೆ.
ಈ ಘಟನಾ ಸಂಬಂಧ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಬಸ್ ದುರಂತದ ಬಳಿಕ ಖಾಸಗಿ ಬಸ್ ಮಾಲೀಕರು ಹಾಗೂ ಚಾಲಕರು ಸಂಪೂರ್ಣವಾಗಿ ಎಚ್ಚೆತ್ತುಕೊಂಡಿಲ್ಲ ಎನ್ನುವ ಆರೋಪಗಳು ಕೇಳಿಬಂದಿದೆ. ಸುರಕ್ಷತೆ ಕಡೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ ಎಂದು ಪ್ರಯಾಣಿಕರ ಆಕ್ರೋಶ ಹೊರಹಾಕುತ್ತಿದ್ದಾರೆ.
ಇದನ್ನೂ ಓದಿ: ಸಾಲ ವಸೂಲಿ ವಿಷಯದಲ್ಲಿ ಜಗಳ | ಕುಡಿದ ಮತ್ತಿನಲ್ಲಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಕುಡುಕ!



















