ಕೊಲ್ಕತ್ತಾ : ಪಶ್ಚಿಮ ಬಂಗಾಳದ 5 ಕಡೆಗಳಲ್ಲಿ ಇಂದು ಇಡಿ ದಾಳಿ ನಡೆದಿದೆ. ಅದರಲ್ಲೂ ಮುಖ್ಯವಾಗಿ ಜಾರಿ ನಿರ್ದೇಶನಾಲಯ (ED) I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ದಾಳಿ ಮಾಡಿದೆ. ಈ ವರ್ಷದ ವಿಧಾನಸಭಾ ಚುನಾವಣೆ ನಡೆಯಲಿರುವ ಬಂಗಾಳದಲ್ಲಿ ನಡೆದ ಈ ದಾಳಿ ಬಹಳ ಮಹತ್ವ ಪಡೆದಿದೆ.
ಜಾರಿ ನಿರ್ದೇಶನಾಲಯದ (ಇಡಿ) ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಚುನಾವಣಾ ಸಲಹೆಗಾರ ಐಪ್ಯಾಕ್ (I-PAC) ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆಯಿಂದ ಲ್ಯಾಪ್ಟಾಪ್, ಫೋನ್ ಮತ್ತು ಬಹು ದಾಖಲೆಗಳನ್ನು ಹೊತ್ತೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ದಾಳಿಯನ್ನು ಬಿಜೆಪಿಯ ರಾಜಕೀಯ ಪ್ರೇರಿತ ಎಂದು ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದರೂ ಇಡಿ ಈ ಆರೋಪಗಳನ್ನು ನಿರಾಕರಿಸಿದೆ. ಇದು ಯಾವುದೇ ರಾಜಕೀಯ ಪಕ್ಷಗಳನ್ನು ಗುರಿಯಾಗಿಸಿಕೊಂಡು ನಡೆದ ದಾರಿಯಲ್ಲ ಎಂದು ಹೇಳಿದೆ. ನಾವು ಯಾವುದೇ ಪಕ್ಷದ ಕಚೇರಿಯನ್ನು ಶೋಧಿಸಿಲ್ಲ. ಈ ಶೋಧನೆಯು ಯಾವುದೇ ಚುನಾವಣೆಗಳಿಗೆ ಸಂಬಂಧಿಸಿಲ್ಲ ಮತ್ತು ಹಣ ವರ್ಗಾವಣೆಯ ವಿರುದ್ಧ ನಿಯಮಿತ ಕ್ರಮದ ಭಾಗವಾಗಿದೆ ಎಂದು ED ತಿಳಿಸಿದೆ.
ಇದನ್ನೂ ಓದಿ : ನ್ಯೂಜಿಲೆಂಡ್ ಸರಣಿಯಿಂದ ತಿಲಕ್ ವರ್ಮಾ ಔಟ್ | ಟಿ20 ವಿಶ್ವಕಪ್ಗೂ ಮುನ್ನ ಭಾರತಕ್ಕೆ ಬಿಗ್ ಶಾಕ್!



















