ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಗ್ರಾಹಕರಿಗೆ ಬಂಪರ್ ಆಫರ್ | ಯುರೋಪಿಯನ್ ಕಾರುಗಳ ಮೇಲಿನ ಆಮದು ಸುಂಕ ಶೇ.40ಕ್ಕೆ ಇಳಿಕೆ?

January 26, 2026
Share on WhatsappShare on FacebookShare on Twitter

ನವದೆಹಲಿ: ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆಯುವಂತಹ ಬೆಳವಣಿಗೆಯೊಂದು ನಡೆದಿದ್ದು, ಐರೋಪ್ಯ ಒಕ್ಕೂಟದೊಂದಿಗೆ ನಡೆಯುತ್ತಿರುವ ‘ಮುಕ್ತ ವ್ಯಾಪಾರ ಒಪ್ಪಂದ’ದ (FTA) ಭಾಗವಾಗಿ, ವಿದೇಶಿ ಕಾರುಗಳ ಮೇಲೆ ವಿಧಿಸಲಾಗುತ್ತಿದ್ದ ಭಾರಿ ಪ್ರಮಾಣದ ಆಮದು ಸುಂಕವನ್ನು ಕೇಂದ್ರ ಸರ್ಕಾರವು ಗಣನೀಯವಾಗಿ ಇಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಭಾರತದ ರಕ್ಷಿತ ಮಾರುಕಟ್ಟೆ ಈಗ ಜಾಗತಿಕ ಕಂಪನಿಗಳಿಗೆ ಮತ್ತಷ್ಟು ಹತ್ತಿರವಾಗಲಿದೆ.

ಪ್ರಸ್ತುತ ಯುರೋಪ್‌ನಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲೆ ಭಾರತವು ಶೇ.70ರಿಂದ ಶೇ.110ರಷ್ಟು ಭಾರೀ ಸುಂಕವನ್ನು ವಿಧಿಸುತ್ತಿದೆ. ಆದರೆ ಹೊಸ ಒಪ್ಪಂದದ ಅಡಿಯಲ್ಲಿ, 15,000 ಯುರೋಗಳಿಗಿಂತ (ಸುಮಾರು 16.3 ಲಕ್ಷ ರೂ.) ಹೆಚ್ಚು ಬೆಲೆಯ ಕಾರುಗಳ ಮೇಲೆ ಈ ತೆರಿಗೆಯನ್ನು ತಕ್ಷಣವೇ ಶೇ.40ಕ್ಕೆ ಇಳಿಸಲು ಸರ್ಕಾರ ಸಮ್ಮತಿಸಿದೆ. ಮುಂದಿನ ದಿನಗಳಲ್ಲಿ ಈ ಸುಂಕವನ್ನು ಹಂತಹಂತವಾಗಿ ಶೇ.10ಕ್ಕೆ ಇಳಿಸುವ ಗುರಿಯನ್ನು ಹೊಂದಲಾಗಿದ್ದು, ಇದು ಭಾರತೀಯ ಮಾರುಕಟ್ಟೆಯಲ್ಲಿ ಯುರೋಪಿಯನ್ ಕಾರುಗಳ ಬೆಲೆ ಗಣನೀಯವಾಗಿ ಇಳಿಯಲು ಕಾರಣವಾಗಲಿದೆ.

ಪ್ರಮುಖ ಕಂಪನಿಗಳಿಗೆ ವರದಾನ

ಈ ನಿರ್ಧಾರದಿಂದಾಗಿ ಫೋಕ್ಸ್‌ವ್ಯಾಗನ್ (Volkswagen), ರೆನೋ(Renault), ಬಿಎಂಡಬ್ಲ್ಯು (BMW), ಮತ್ತು ಮರ್ಸಿಡಿಸ್ ಬೆಂಜ್ (Mercedes-Benz) ನಂತಹ ಕಂಪನಿಗಳಿಗೆ ದೊಡ್ಡ ಅನುಕೂಲವಾಗಲಿದೆ. ಸದ್ಯ ಭಾರತದ ಕಾರು ಮಾರುಕಟ್ಟೆಯಲ್ಲಿ ಯುರೋಪಿಯನ್ ಕಂಪನಿಗಳ ಪಾಲು ಕೇವಲ ಶೇ.4ರಷ್ಟಿದೆ. ತೆರಿಗೆ ಇಳಿಕೆಯಿಂದಾಗಿ ಈ ಕಂಪನಿಗಳು ತಮ್ಮ ಜಾಗತಿಕ ಮಟ್ಟದ ಅತ್ಯಾಧುನಿಕ ಕಾರುಗಳನ್ನು ಕಡಿಮೆ ಬೆಲೆಗೆ ಭಾರತಕ್ಕೆ ತರಲು ಸಾಧ್ಯವಾಗುತ್ತದೆ, ಇದರಿಂದ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಾಗಲಿವೆ.

ಸ್ವದೇಶಿ ಎಲೆಕ್ಟ್ರಿಕ್ ವಾಹನಗಳಿಗೆ ರಕ್ಷಣೆ

ಒಂದೆಡೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮೇಲಿನ ತೆರಿಗೆ ಇಳಿಕೆಯಾಗುತ್ತಿದ್ದರೂ, ಎಲೆಕ್ಟ್ರಿಕ್ ವಾಹನಗಳ (EV) ವಿಷಯದಲ್ಲಿ ಭಾರತ ಸರ್ಕಾರವು ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಮುಂದಿನ ಐದು ವರ್ಷಗಳವರೆಗೆ ಇವಿಗಳ ಮೇಲಿನ ಆಮದು ಸುಂಕದಲ್ಲಿ ಯಾವುದೇ ರಿಯಾಯಿತಿ ನೀಡುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಟಾಟಾ ಮೋಟಾರ್ಸ್ ಮತ್ತು ಮಹೀಂದ್ರಾ ಅಂಡ್ ಮಹೀಂದ್ರಾದಂತಹ ದೇಶೀಯ ಕಂಪನಿಗಳು ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಮಾಡಿರುವ ಹೂಡಿಕೆಯನ್ನು ರಕ್ಷಿಸಲು ಮತ್ತು ‘ಮೇಕ್ ಇನ್ ಇಂಡಿಯಾ’ ಅಭಿಯಾನಕ್ಕೆ ಧಕ್ಕೆಯಾಗದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ಒಪ್ಪಂದಗಳ ಮಹಾತಾಯಿ’ – ಜಾಗತಿಕ ಆರ್ಥಿಕ ಬದಲಾವಣೆ

ಈ ವ್ಯಾಪಾರ ಒಪ್ಪಂದವನ್ನು ಅಧಿಕಾರಿಗಳು “ಮದರ್ ಆಫ್ ಆಲ್ ಡೀಲ್ಸ್” (ಎಲ್ಲಾ ಒಪ್ಪಂದಗಳ ಮಹಾತಾಯಿ) ಎಂದು ಬಣ್ಣಿಸುತ್ತಿದ್ದಾರೆ. ಕೇವಲ ಆಟೋಮೊಬೈಲ್ ಮಾತ್ರವಲ್ಲದೆ, ಜವಳಿ ಮತ್ತು ಆಭರಣ ರಫ್ತಿಗೂ ಈ ಒಪ್ಪಂದದಿಂದ ದೊಡ್ಡ ಬಲ ಸಿಗಲಿದೆ. ಅಮೆರಿಕದ ಸುಂಕದ ನೀತಿಗಳಿಂದಾಗಿ ಅಲ್ಪಮಟ್ಟಿನ ಹಿನ್ನಡೆ ಅನುಭವಿಸಿದ್ದ ಭಾರತೀಯ ರಫ್ತುದಾರರಿಗೆ ಈಗ ಯುರೋಪ್ ಮಾರುಕಟ್ಟೆ ತೆರೆದುಕೊಳ್ಳಲಿದೆ. ಮಂಗಳವಾರ(ಜ.27) ಈ ಐತಿಹಾಸಿಕ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ: ಭಾರತದ ಜೊತೆ ಸ್ನೇಹ ಹಸ್ತ, ಪಾಕಿಸ್ತಾನಕ್ಕೆ ಬಿಗ್ ಶಾಕ್ | ವಿಮಾನ ನಿಲ್ದಾಣ ಒಪ್ಪಂದದಿಂದ ಹಿಂದೆ ಸರಿದ ಯುಎಇ

Tags: Bumper offerEuropean carsImport dutyIndiaIndian customersKarnataka News beatreduced to 40%
SendShareTweet
Previous Post

ಮಾಜಿ ಪ್ರಿಯಕರನ ವೈದ್ಯೆ ಪತ್ನಿಗೆ ಎಚ್‌ಐವಿ ಇಂಜೆಕ್ಷನ್ ಚುಚ್ಚಿದ ಮಹಿಳೆ!

Next Post

ಗೋಕರ್ಣದಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿದ ಮೂವರು ಪ್ರವಾಸಿಗರ ರಕ್ಷಣೆ | ಸಾರ್ವಜನಿಕರಿಂದ ಲೈಫ್ ಗಾರ್ಡ್ಸ್‌ಗೆ ಭಾರೀ ಮೆಚ್ಚುಗೆ

Related Posts

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?
ದೇಶ

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!
ದೇಶ

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ
ದೇಶ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!
ದೇಶ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

Next Post
ಗೋಕರ್ಣದಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿದ ಮೂವರು ಪ್ರವಾಸಿಗರ ರಕ್ಷಣೆ | ಸಾರ್ವಜನಿಕರಿಂದ ಲೈಫ್ ಗಾರ್ಡ್ಸ್‌ಗೆ ಭಾರೀ ಮೆಚ್ಚುಗೆ

ಗೋಕರ್ಣದಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿದ ಮೂವರು ಪ್ರವಾಸಿಗರ ರಕ್ಷಣೆ | ಸಾರ್ವಜನಿಕರಿಂದ ಲೈಫ್ ಗಾರ್ಡ್ಸ್‌ಗೆ ಭಾರೀ ಮೆಚ್ಚುಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

Recent News

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat