ಶಿವಮೊಗ್ಗ:ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಸೋಂಕಿನಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸಸಿ ತೋಟದ ನಿವಾಸಿ ಕಿಶೋರ್(29)ಮೃತ ಯುವಕ. ಜ.20 ರಿಂದ ಕಿಶೋರ್ ವಿಪರೀತ ಜ್ವರದಿಂದ ಬಳಲುತ್ತಿದ್ದ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಜ್ವರದ ತೀವ್ರತೆ ಹೆಚ್ಚಾಗಿತ್ತು.
ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ, ಜ.25 ರಂದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ತಜ್ಞ ವೈದ್ಯರ ತಂಡ ಸತತ ಪ್ರಯತ್ನ ನಡೆಸಿದರೂ, ಸೋಂಕಿನ ತೀವ್ರತೆಯಿಂದಾಗಿ ಅವರು ನಿನ್ನೆ ಬುಧವಾರ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಸನ್ ರೂಫ್ ಓಪನ್ ಮಾಡಿಕೊಂಡು ಅಪಾಯಕಾರಿ ಚಾಲನೆ ಮಾಡಿದ್ದಕ್ಕೆ ಬಿತ್ತು ಫೈನ್..!



















