ಬೆಂಗಳೂರು | ಬೆಂಗಳೂರಿನಲ್ಲಿ 4 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚೀಟಿ ವ್ಯವಹಾರ ಕೇಸ್ನಲ್ಲಿ ಇನ್ಸ್ಪೆಕ್ಟರ್ ಗೋವಿಂದರಾಜು ಲಂಚ ಪಡೆಯುವ ವೇಳೆ ಲಾಕ್ ಆಗಿದ್ದಾರೆ. ಸದ್ಯ ಗೋವಿಂದರಾಜು ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ಸ್ಪೆಕ್ಟರ್ ಗೋವಿಂದರಾಜು ವ್ಯಕ್ತಿಯೊಬ್ಬರನ್ನು ಚೀಟಿ ವ್ಯವಹಾರದ ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ 4 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇಂದು ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ನೇತೃತ್ವದ ತಂಡ ದಾಳಿನಡೆಸಿ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಬಂಧಿಸಿದೆ.
ಇದನ್ನೂ ಓದಿ : ಇನ್ಮುಂದೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಸೇವೆ ನೀಡುವಂತಿಲ್ಲ | ಆರೋಗ್ಯ ಇಲಾಖೆ ಆದೇಶ



















