ಬೆಂಗಳೂರು: ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ ಇದೀಗ ಗಂಭೀರ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಎಂಟ್ರಿ ಸಾಧ್ಯತೆ ಇರುವ ಬಗ್ಗೆ ಚರ್ಚೆಗಳು ಜೋರಾಗಿವೆ.
ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಕೇರಳ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ನಡುವೆ, ರಾಜ್ಯ ಸರ್ಕಾರದಿಂದಲೂ ಕೂಡ ಇದು ಆತ್ಮಹತ್ಯೆಯಲ್ಲ, ಬೇರೆ ಆಯಾಮಗಳಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಒಂದು ಕಡೆ, ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿಬರುತ್ತಿದ್ದರೆ, ಮತ್ತೊದೆಡೆ ಆತ್ಮಹತ್ಯೆ ಪ್ರಕರಣದ ಸುತ್ತ ಅನೇಕ ಅನುಮಾನಗಳು ಹುಟ್ಟಿಕೊಂಡಿದ್ದು, ಕೆಲ ನಾಯಕರು ಇದೊಂದು ಕೊಲೆ ಪ್ರಕರಣವಾಗಿರಬಹುದು ಎಂದು ಆರೋಪಿಸುತ್ತಿದ್ದಾರೆ.
ಈ ಪ್ರಕರಣದ ಕುರಿತು ವಿವಿಧ ರಾಜಕೀಯ ನಾಯಕರು ವಿಭಿನ್ನ ವ್ಯಾಖ್ಯಾನಗಳನ್ನು ನೀಡುತ್ತಿದ್ದು, ವಿಷಯ ದಿನದಿಂದ ದಿನಕ್ಕೆ ಹೆಚ್ಚು ರಾಜಕೀಯ ಬಣ್ಣ ಪಡೆಯುತ್ತಿದೆ. ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಸನ್ನಿವೇಶಗಳು ತೀವ್ರ ಅನುಮಾನ ಮೂಡಿಸುತ್ತಿದ್ದು, ಪ್ರಕರಣದ ಸತ್ಯಾಂಶ ಬಹಿರಂಗವಾಗಬೇಕೆಂಬ ಒತ್ತಾಯ ಹೆಚ್ಚುತ್ತಿದೆ.
ಇದನ್ನೂ ಓದಿ : 120 ಗ್ರಾಂ ಚಿನ್ನ ಕಳ್ಳತನ ಕೇಸ್ | 11 ವರ್ಷದ ಬಾಲಕನ ಮೇಲೆ ಹಲ್ಲೆ ಆರೋಪ ; ಪೊಲೀಸರ ವಿರುದ್ಧ ಕುಟುಂಬಸ್ಥರು ಗರಂ


















