ನವದೆಹಲಿ: ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಭಾವುಕವಾಗಿ ಮಾತನಾಡಿ, ಕರ್ನಾಟಕದ ಜನರು ಹಾಗೂ ರೈತರ ಸಂಕಷ್ಟವನ್ನು ಸದನದ ಮುಂದಿಟ್ಟಿದ್ದಾರೆ.
ನೀರಾವರಿ ಯೋಜನೆಗಳ ಕುರಿತು ಪ್ರಸ್ತಾಪಿಸಿದ ದೇವೇಗೌಡರು, ನಮ್ಮ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ದಯವಿಟ್ಟು ನಮ್ಮ ರೈತರ ಹಿತ ಕಾಪಾಡಿ, ಈ ವೃದ್ಧನ ಮನವಿಗೆ ಸ್ಪಂದಿಸಿ ಎಂದು ಕೇಂದ್ರ ಸರ್ಕಾರವನ್ನು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಾಗಿದೆ. ಅನೇಕ ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳು ವಿವಿಧ ಕಾರಣಗಳಿಂದ ಹಳ್ಳ ಹಿಡಿದಿವೆ. ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಯೋಜನೆಗಳಿಗೆ ಶೀಘ್ರ ಅನುಮೋದನೆ ನೀಡಿ, ರಾಜ್ಯದ ಜನರ ಸಮಸ್ಯೆಯನ್ನು ಹೋಗಲಾಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ : ಪತ್ನಿಯ ಶೀಲ ಶಂಕಿಸಿ, ತಲೆ ಬೋಳಿಸಿದ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!



















