ಮೈಸೂರು : ವೃದ್ಧನ ಬಲಿ ಪಡೆದಿದ್ದ ದೃಷ್ಟಿಹೀನ ಒಂಟಿ ಸಲಗನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಯಶಸ್ವಿಯಾಗಿ ಸೆರೆ ಹಿಡಿದಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮಠದ ಕಟ್ಟೆ ಗ್ರಾಮದಲ್ಲಿ ನಡೆದಿದೆ.
ಫೆ. 5ರಂದು ರಸ್ತೆ ಬದಿ ಬಹಿರ್ದೆಸೆಗೆ ತೆರಳಿದ್ದ ವೃದ್ಧನ ಮೇಲೆ ದಾಳಿ ಮಾಡಿ ಕೊಂದಿದ್ದ ಈ ಒಂಟಿ ಸಲಗನಿಂದ ಗ್ರಾಮಸ್ಥರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿತ್ತು. ಘಟನೆಯ ಬಳಿಕ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ, ಸಾಕಾನೆಗಳ ಸಹಾಯದಿಂದ ಸಲಗನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಎರಡೂ ಕಣ್ಣುಗಳಿಗೆ ಗಾಯವಾಗಿದ್ದು, ಸುಮಾರು ಶೇ. 60 ರಷ್ಟು ದೃಷ್ಟಿ ಕಳೆದುಕೊಂಡಿದ್ದರಿಂದ ಸಲಗ ಆಕ್ರೋಶದಿಂದ ವರ್ತಿಸುತ್ತಿದ್ದುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸೆರೆ ಹಿಡಿದ ಸಲಗನನ್ನು ರಾಮಾಪುರ ಆನೆ ಶಿಬಿರಕ್ಕೆ ಕೊಂಡೊಯ್ಯಲಾಗಿದ್ದು, ಅಲ್ಲಿ ಚಿಕಿತ್ಸೆ ಹಾಗೂ ತರಬೇತಿ ನೀಡಲು ಅರಣ್ಯ ಇಲಾಖೆ ಮುಂದಾಗಿದೆ. ಗ್ರಾಮದಲ್ಲಿ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ಕಂಪ್ಲಿ ಉತ್ಸವಕ್ಕೆ ಅದ್ದೂರಿ ತೆರೆ | ಚಂದನ್ ಶೆಟ್ಟಿ ಜೊತೆ ಭರ್ಜರಿ ಹೆಜ್ಜೆ ಹಾಕಿದ ಶಾಸಕ ಜೆ.ಎನ್ ಗಣೇಶ್



















