ಬೆಂಗಳೂರು : ಶಾಸಕ ಬೈರತಿ ಬಸವರಾಜ್ ಬಂಧನ ಹಿನ್ನೆಲೆ ಬಿಜೆಪಿ ನಾಯಕರು ಬಸವರಾಜ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಂಧನದ ನಂತರ ಬೈರತಿ ಬಸವರಾಜ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ಈ ವೇಳೆ ಸಂಸದ ಗೋವಿಂದ ಕಾರಜೋಳ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಉಪಸ್ಥಿತರಿದ್ದರು.
ನಾಯಕರು ಕುಟುಂಬದವರೊಂದಿಗೆ ಮಾತುಕತೆ ನಡೆಸಿ, ಕಾನೂನು ಹೋರಾಟದಲ್ಲಿ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ಇದಕ್ಕೂ ಮುನ್ನ ನಿನ್ನೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ಭೈರತಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು.
ಇದನ್ನೂ ಓದಿ : ವಿದೇಶದಲ್ಲಿ ಕುಳಿತು ಮಂಗಳೂರು ಯುವತಿಯರಿಗೆ ಗಾಳ | ಗಂಡನ ವಿರುದ್ಧವೇ ದೂರು ಕೊಟ್ಟ ಪತ್ನಿ!



















