ಬೆಂಗಳೂರು: ಆರ್ ಆರ್ ನಗರ ವ್ಯಾಪ್ತಿಯಲ್ಲಿ ಮನೆ ಕಳ್ಳತನದ ಘಟನೆ ನಡೆದಿದ್ದು, ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣವನ್ನು ಖದೀಮರು ದೋಚಿಕೊಂಡು ಪರಾರಿಯಾಗಿದ್ದಾರೆ.
ವಿಂದ್ಯಾ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ ಸುಮಾರು 1.4 ಲಕ್ಷ ರೂಪಾಯಿ ನಗದು ಹಾಗೂ 9 ಗ್ರಾಂ ಚಿನ್ನಾಭರಣವನ್ನು ಕಳ್ಳರು ಕದಿದ್ದಾರೆ ಎಂದು ತಿಳಿದುಬಂದಿದೆ.
ಕಳ್ಳರ ದುಷ್ಕೃತ್ಯ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಯೂನಿಫಾರ್ಮ್ನಲ್ಲಿ ಮನೆಗೆ ನುಗ್ಗಿ ರಾಬರಿ


















