ಮೈಸೂರು : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯ ಎಸ್ ಬಿ.ಎಂ ಆರ್ಚ್ ಬಳಿ ನಡೆದಿದೆ. ಟಿಕೆ ಲೇಔಟ್ ನಿವಾಸಿ ದರ್ಶನ್(27) ಮೃತ ದುರ್ದೈವಿ.
ನಿನ್ನೆ ಗುರುವಾರ ರಾತ್ರಿ10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕುವೆಂಪು ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಸದ್ಯ ಮೃತದೇಹವನ್ನು ಕೆ.ಆರ್ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಈ ಘಟನಾ ಸಂಬಂಧ ಕುವೆಂಪು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹಳಿ ತಪ್ಪಿದ ನಮ್ಮ ಮೆಟ್ರೋ



















