ಉಡುಪಿ : ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ವ್ಯಕ್ತಿಗಳಿಬ್ಬರು ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗನ್ನು ಪೊಲೀಸ್ ಠಾಣೆಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಘಟನೆಯೊಂದರಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ಸುಮಾರು 15 ಸಾವಿರ ರೂಪಾಯಿ ನಗದು ಹಣವಿದ್ದ ಬ್ಯಾಗನ್ನು ಪ್ರವಾಸಿಗರೊಬ್ಬರು ತಂದು ಠಾಣೆಗೆ ಒಪ್ಪಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಅಭಿಷೇಕ್ ಎಂಬ ಕೇರಳದ ಪೊಲೀಸರೊಬ್ಬರ ಪತ್ನಿಯ ಸುಮಾರು 3 ಸಾವಿರ ರೂ. ನಗದು ಮತ್ತು ಐಫೋನ್ ಮೊಬೈಲ್ ಇದ್ದ ಬ್ಯಾಗನ್ನು ಕೊಡಚಾದ್ರಿ ಜೀಪ್ ಚಾಲಕ ಮುದೂರಿನ ಶರತ್ ಎನ್ನುವರು ಠಾಣೆಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ವಾರಸುದಾರರಿಗೆ ವಸ್ತುಗಳನ್ನು ಹಸ್ತಾಂತರಿಸಲಾಗಿದ್ದು, ಪ್ರವಾಸಿಗ ಮತ್ತು ಜೀಪ್ ಚಾಲಕನ ಪ್ರಾಮಾಣಿಕತೆಯ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಮೆಚ್ಚುಗೆ ವ್ಯಕ್ತಪಡಿಸಿದೆ.
ಇದನ್ನೂ ಓದಿ : ನನ್ನ ತಾಯಿಯ ಸಾವಿಗೆ ತಂದೆ, ಸಹೋದರನೇ ಕಾರಣ | ಮಗಳು ಆರೋಪ



















