ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

AI ಶೃಂಗದಲ್ಲಿ ‘ಅರೆಬೆತ್ತಲೆ’ ಪ್ರತಿಭಟನೆ | ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

February 24, 2026
Share on WhatsappShare on FacebookShare on Twitter

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ‘ಎಐ ಇಂಪ್ಯಾಕ್ಟ್ ಶೃಂಗಸಭೆ‘ಯ (AI Impact Summit) ವಸ್ತುಪ್ರದರ್ಶನದ ವೇದಿಕೆಗೆ ನುಗ್ಗಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಬಂಧಿತರಾದವರ ಸಂಖ್ಯೆ 8ಕ್ಕೇರಿದಂತಾಗಿದೆ.

ಸತತ 20 ಗಂಟೆಗಳ ಕಾಲ ಉದಯ್ ಭಾನು ಅವರನ್ನು ವಿಚಾರಣೆ ನಡೆಸಿದ ದೆಹಲಿ ಪೊಲೀಸರು, ಅವರು ತನಿಖೆಗೆ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಆರೋಪದ ಮೇಲೆ ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ 4:30ರ ಸುಮಾರಿಗೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಉದಯ್ ಭಾನು ವಿರುದ್ಧ ಕ್ರಿಮಿನಲ್ ಪಿತೂರಿ, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ, ಸಾರ್ವಜನಿಕ ಸೇವಕನಿಗೆ ಹಾನಿ ಉಂಟುಮಾಡಿದ ಮತ್ತು ಉದ್ದೇಶಪೂರ್ವಕ ಅಸಹಕಾರದಂತಹ ಗಂಭೀರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಇದೀಗ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್‌ನ ಅಂತಾರಾಜ್ಯ ಕೋಶಕ್ಕೆ (ISC) ವರ್ಗಾಯಿಸಲಾಗಿದೆ. ಆರೋಪಿಯನ್ನು ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಪೊಲೀಸರು, ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನೇಪಾಳದ ‘ಜೆನ್ ಜೀ’ ಪ್ರತಿಭಟನೆ ಮಾದರಿಯ ಸಂಚು?

ನ್ಯಾಯಾಲಯದಲ್ಲಿ ವಾದ ಮಂಡಿಸಿದ ಪೊಲೀಸರು, ಇದೊಂದು ಸಾಮಾನ್ಯ ಪ್ರತಿಭಟನೆಯಲ್ಲ, ಬದಲಾಗಿ ಜಾಗತಿಕ ಗಣ್ಯರ ಸಮ್ಮುಖದಲ್ಲಿ ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಉದ್ದೇಶಪೂರ್ವಕ ಪಿತೂರಿ ಎಂದು ಪ್ರತಿಪಾದಿಸಿದ್ದಾರೆ. ಇತ್ತೀಚೆಗೆ ನೇಪಾಳದಲ್ಲಿ ಸರ್ಕಾರವನ್ನು ಉರುಳಿಸಿದ ‘ಜೆನ್ ಜೀ’ (Gen Z) ಪ್ರತಿಭಟನೆಯಿಂದ ಪ್ರೇರಣೆ ಪಡೆದು ಈ ಕೃತ್ಯ ಎಸಗಲಾಗಿದೆ ಎಂದೂ ಆರೋಪಿಸಿದ್ದಾರೆ. ಪ್ರತಿಭಟನಾಕಾರರು ಧರಿಸಿದ್ದ ಟಿ-ಶರ್ಟ್‌ಗಳ ಮೇಲೆ “ಪಿಎಂ ಈಸ್ ಕಾಂಪ್ರಮೈಸ್ಡ್”, “ಇಂಡಿಯಾ-ಯುಎಸ್ ಟ್ರೇಡ್ ಡೀಲ್” ಮತ್ತು “ಎಪ್ಸ್ಟೀನ್ ಫೈಲ್ಸ್” ಮುಂತಾದ ಬರಹಗಳಿದ್ದವು. ಇವುಗಳ ಮುದ್ರಣಕ್ಕೆ ಯಾರು ಹಣಕಾಸು ಒದಗಿಸಿದ್ದಾರೆ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳ ಮುಖಾಮುಖಿ ವಿಚಾರಣೆ ಬಳಿಕವಷ್ಟೇ ಈ ಷಡ್ಯಂತ್ರದ ರೂಪುರೇಷೆಗಳು ಬಹಿರಂಗವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲೇ ಇರಲಿಲ್ಲ ಎಂದ ವಕೀಲರು

ಉದಯ್ ಭಾನು ಅವರ ಪರ ವಕೀಲರು ನ್ಯಾಯಾಲಯದಲ್ಲಿ ಪೊಲೀಸರ ವಾದವನ್ನು ತಳ್ಳಿಹಾಕಿದರು. ಉದಯ್ ಅವರು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಅವರು ಪ್ರತಿಭಟನಾ ಸ್ಥಳದಲ್ಲಿ ಹಾಜರಿರಲಿಲ್ಲ ಹಾಗೂ ಯಾರಿಗೂ ಪ್ರತಿಭಟನೆಗೆ ಸಂಬಂಧಿಸಿದ ಯಾವುದೇ ಸೂಚನೆಗಳನ್ನು ನೀಡಿರಲಿಲ್ಲ ಎಂದು ವಾದಿಸಿದ್ದಾರೆ. ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ ಪ್ರಕ್ರಿಯೆ. ಇದು ಭಾರತವು ಒಂದು ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರ ಎಂಬುದನ್ನು ಜಗತ್ತಿಗೆ ತೋರಿಸುತ್ತದೆ ಎಂದು ವಕೀಲರು ವಾದ ಮಂಡಿಸಿದ್ದಾರೆ.

ತಾರಕಕ್ಕೇರಿದ ಕೆಸರೆರಚಾಟ

ಯುವ ಕಾಂಗ್ರೆಸ್ ಮುಖಂಡನ ಬಂಧನವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ, ಶಾಂತಿಯುತ ಪ್ರತಿಭಟನೆ ಮಾಡುವುದಕ್ಕೂ ಸರ್ಕಾರ ಅಡ್ಡಿಪಡಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ. ಮತ್ತೊಂದೆಡೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು “ಮಾನಸಿಕ ಅಸ್ವಸ್ಥ” ಎಂದು ಜರಿದಿದ್ದು, ಅವರು ಮುಂದೊಂದು ದಿನ ಸಂಸತ್ತಿಗೂ ಒಳಉಡುಪಿನಲ್ಲಿ ಬರಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ : ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾ ‘ಚೋಕರ್ಸ್’ | ಪಾಕ್​ ಆಟಗಾರನ ಅಪಹಾಸ್ಯ

Tags: IndiaKarnataka News beat
SendShareTweet
Previous Post

ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾ ‘ಚೋಕರ್ಸ್’ | ಪಾಕ್​ ಆಟಗಾರನ ಅಪಹಾಸ್ಯ

Next Post

ಅನಾಮಧೇಯ ವ್ಯಕ್ತಿಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲೇ ಬೀಡು ಬಿಟ್ಟ ಪೊಲೀಸರು

Related Posts

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!
ದೇಶ

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಚಂದ್ರಯಾನ-2 ಆರ್ಬಿಟರ್‌ನಿಂದ ಅದ್ಭುತ ಆವಿಷ್ಕಾರ :ಚಂದ್ರನ ದಕ್ಷಿಣ ಧ್ರುವದಲ್ಲಿ ಮಂಜುಗಡ್ಡೆ ಪತ್ತೆ!
ದೇಶ

ಚಂದ್ರಯಾನ-2 ಆರ್ಬಿಟರ್‌ನಿಂದ ಅದ್ಭುತ ಆವಿಷ್ಕಾರ :ಚಂದ್ರನ ದಕ್ಷಿಣ ಧ್ರುವದಲ್ಲಿ ಮಂಜುಗಡ್ಡೆ ಪತ್ತೆ!

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!
ದೇಶ

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

ಭೀಕರ ಬಿಸಿಲಿಗೆ ಮರಗಳಿಂದ ಉದುರಿ ಬಿದ್ದು ಪ್ರಾಣಬಿಟ್ಟ 700ಕ್ಕೂ ಹೆಚ್ಚು ಬಾವಲಿ, ಪಕ್ಷಿಗಳು!
ದೇಶ

ಭೀಕರ ಬಿಸಿಲಿಗೆ ಮರಗಳಿಂದ ಉದುರಿ ಬಿದ್ದು ಪ್ರಾಣಬಿಟ್ಟ 700ಕ್ಕೂ ಹೆಚ್ಚು ಬಾವಲಿ, ಪಕ್ಷಿಗಳು!

ದೆಹಲಿ ಸೇರಿ ನಾಲ್ಕು ರಾಜ್ಯಗಳಿಗೆ ಬಿಜೆಪಿ ನೂತನ ಅಧ್ಯಕ್ಷರ ಘೋಷಣೆ : ಕರ್ನಾಟಕ ಯಾವಾಗ?
ದೇಶ

ದೆಹಲಿ ಸೇರಿ ನಾಲ್ಕು ರಾಜ್ಯಗಳಿಗೆ ಬಿಜೆಪಿ ನೂತನ ಅಧ್ಯಕ್ಷರ ಘೋಷಣೆ : ಕರ್ನಾಟಕ ಯಾವಾಗ?

ವಿಮಾ ಸುರಕ್ಷತೆ ಬಗ್ಗೆ ಸರ್ಕಾರಿ ನೌಕರರಿಗೆ ಮಹತ್ವದ ಸ್ಪಷ್ಟನೆ ನೀಡಿದ ಸರ್ಕಾರ!
ದೇಶ

ವಿಮಾ ಸುರಕ್ಷತೆ ಬಗ್ಗೆ ಸರ್ಕಾರಿ ನೌಕರರಿಗೆ ಮಹತ್ವದ ಸ್ಪಷ್ಟನೆ ನೀಡಿದ ಸರ್ಕಾರ!

Next Post
ಅನಾಮಧೇಯ ವ್ಯಕ್ತಿಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲೇ ಬೀಡು ಬಿಟ್ಟ ಪೊಲೀಸರು

ಅನಾಮಧೇಯ ವ್ಯಕ್ತಿಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ | ಸ್ಥಳದಲ್ಲೇ ಬೀಡು ಬಿಟ್ಟ ಪೊಲೀಸರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

Recent News

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat