ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಡಾನೆಗಳ ಸಂಚಾರ ಮುಂದುವರೆದಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇದೀಗ ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಅಂಡವಾನೆ ಸಮೀಪ ಕಾಡಾನೆ ರಸ್ತೆ ದಾಟಿದ ವಿಡಿಯೋ ವೈರಲ್ ಆಗಿದೆ.
ಹುಯಿಗೆರೆ–ಅಂಡವಾನೆ ಮಾಗುಂಡಿ ರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆ, ಅರಣ್ಯ ಪ್ರದೇಶದಿಂದ ರಸ್ತೆ ದಾಟಿ ಮತ್ತೆ ಅರಣ್ಯ ಭಾಗಕ್ಕೆ ತೆರಳಿದೆ. ಅಂಡವಾನೆ ಅರಣ್ಯದ ಮಧ್ಯೆ ಸಾಗುವ ಮುಖ್ಯ ರಸ್ತೆಯಲ್ಲೇ ಕಾಡಾನೆ ಸಂಚರಿಸಿದ್ದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ.
ಈ ಪ್ರದೇಶವು ಬಾಳೆಹೊನ್ನೂರು ಅರಣ್ಯ ವಲಯ ವ್ಯಾಪ್ತಿಗೆ ಸೇರಿದ್ದಾಗಿದ್ದು, ಅರಣ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಕಾಡಾನೆಗಳ ನಿರಂತರ ಸಂಚಾರದಿಂದ ಗ್ರಾಮಸ್ಥರು ಆತಂಕ ಹೆಚ್ಚಾಗಿದ್ದು, ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಶಿವಂ ದುಬೆ ಓರ್ವ ನಿಷ್ಪ್ರಯೋಜಕ ಆಲ್ರೌಂಡರ್ ಎಂದ ಮಾಜಿ ಆಟಗಾರ!



















