ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ್ ಕೊಲೆ ಪ್ರಕರಣದಲ್ಲಿ ಕೊನೆಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಶಾಸಕರಿಗೆ ಸುಪ್ರೀಂ ಕೋರ್ಟ್ನ ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದಾರ್ಥ್ ಲೂಥ್ರಾ, ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಸಾಕ್ಷ್ಯ ನಾಶವಾಗಲಿ ಅಥವಾ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಪ್ರಕರಣ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಿದ್ರೆ ಸಮಸ್ಯೆ ಇಲ್ಲ ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಸಂಜಯ್ ಕರೋಲ್, ವಿನಯ್ ಕುಲಕರ್ಣಿ ಪ್ರಕರಣ ಪ್ರಮುಖ ಆರೋಪಿ, ಆದಾಗ್ಯೂ ಸಾಕ್ಷ್ಯಗಳ ವಿಚಾರಣೆ ಮುಕ್ತಾಯವಾಗಿರುವ ಹಿನ್ನೆಲೆ ಜಾಮೀನು ನೀಡಬಹುದು ಎಂದು ಹೇಳಿದ್ರು. ವಾದ ಪ್ರತಿವಾದಗಳನ್ನ ಆಲಿಸಿದ ಬಳಿಕ ಕೋರ್ಟ್ ಜಾಮೀನು ಮಂಜೂರಿಗೆ ಆದೇಶಿಸಿತು. ಅಲ್ಲದೇ ಇನ್ನೆರಡು ತಿಂಗಳಲ್ಲಿ ವಿಚಾರಣೆ ಆರಂಭಿಸಲು ವಿಚಾರಣಾ ನ್ಯಾಯಲಯಕ್ಕೆ ನಿರ್ದೇಶನ ನೀಡಿತು.
ಇದ್ನೂ ಓದಿ : ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್



















