ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ ಢಾಕಾದ ಅಗರ್ಗಾಂವ್ನಲ್ಲಿ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ.
ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಭಯಗೊಂಡು ಹೊರಗಡೆ ಓಡಿಕೊಂಡು ಬಂದಿದ್ದಾರೆ. ಬಾಂಗ್ಲಾದಲ್ಲಿ ಭೂಕಂಪವಾದರೂ ಪಶ್ಚಿಮ ಬಂಗಾಳದ ಹಲವೆಡೆ ಕಂಪನ ಅನುಭವವಾಗಿದೆ.
ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಸುಕಾಂತ ಮಜುಂದಾರ್ ವೇದಿಕೆಯಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕಂಪನದ ಅನುಭವವಾಗಿದೆ. ಸಚಿವರು ಏನಾಯಿತು ಏನಾಯಿತು ಎಂದು ಸಭಿಕರನ್ನು ಪ್ರಶ್ನಿಸಿ ನಂತರ ಭಾಷಣ ಮುಂದುವರಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಯಾವುದೇ ಸಾವುನೋವುಗಳು ಅಥವಾ ದೊಡ್ಡ ಹಾನಿಯ ವರದಿಗಳು ಬಂದಿಲ್ಲ. ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಜನರು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ : ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾಂಬ್ ದಾಳಿ.. 133 ಮಂದಿ ಸಾವು!



















