‘ಸರಿಗಮಪ’, ‘ಎದೆ ತುಂಬಿ ಹಾಡುವೆನು’ ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ಗಾಯಕ ಅನಿರುದ್ಧ್ ಶಾಸ್ತ್ರಿ ಅವರು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಫೆ. 26ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನಲ್ಲಿ ಭರತನಾಟ್ಯ ಕಲಾವಿದೆ ಶ್ರೇಯಾ ಬಾಲಾಜಿ-ಗಾಯಕ ಅನಿರುದ್ಧ್ ಶಾಸ್ತ್ರಿ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನಡೆದಿದೆ. ಶಾಸ್ತ್ರೋಕ್ತವಾಗಿ, ಸಂಪ್ರದಾಯಬದ್ಧವಾಗಿ, ಅಷ್ಟೇ ಗ್ರ್ಯಾಂಡ್ ಆಗಿ ಕಲ್ಯಾಣ ಜರುಗಿದೆ.
ಕನ್ನಡದ ಕೆಲವು ಸಿನಿಮಾಗಳಲ್ಲಿ ಬಾಲನಟನಾಗಿ ನಟಿಸಿ ಎಲ್ಲರ ಗಮನ ಸೆಳೆದಿದ್ದ ಅನಿರುದ್ಧ ಶಾಸ್ತ್ರಿ ಕನ್ನಡ ಚಿತ್ರರಂಗದ ಜನಪ್ರಿಯ ಗಾಯಕರಾಗಿ ಹೊರ ಹೊಮ್ಮಿದ್ದಾರೆ. ಈಗಾಗಲೇ ಕನ್ನಡದಲ್ಲಿ ಹಲವು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಅನಿರುದ್ಧ ಶಾಸ್ತ್ರಿ, ದರ್ಶನ್ ನಟನೆಯ ‘ಕಾಟೇರ’ ಚಿತ್ರದ ಥೀಮ್ ಸಾಂಗ್ ಹಾಡಿ ಸದ್ದು ಮಾಡಿದ್ದರು. ಬಳಿಕ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕಾಳಿ ಹಾಡು ಕೂಡ ಹಾಡಿದ್ದರು.
ಇದನ್ನೂ ಓದಿ : ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ



















