ಬಳ್ಳಾರಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಸಂಪೂರ್ಣ ಛಿದ್ರ ಛಿದ್ರವಾಗಿರುವ ಘಟನೆ ಬಳ್ಳಾರಿಯ ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ.
ತಾಳೂರು ಗ್ರಾಮದ ನಿವಾಸಿ ಸುಭಾನಿ ಸಾಬ್ ಎನ್ನುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ ಹೊಸ ಸಿಲಿಂಡರ್ ತಂದು ಕೂಡಿಸುವಾಗ ಗ್ಯಾಸ್ ಲೀಕೆಜ್ ಅಗಿದೆ. ಕೂಡಲೇ ಮನೆಯವರೆಲ್ಲ ಹೊರಗೆ ಬಂದಿದ್ದಾರೆ. ಕ್ಷಣಾರ್ಧದಲ್ಲಿ ಸಿಲಿಂಡರ್ ಬ್ಲಾಸ್ಟ್ ಅಗಿದ್ದು, ಅದೃಷ್ಟವಾಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಸಿಲಿಂಡರ್ ಸ್ಫೋಟದ ತೀವ್ರತೆಗೆ ಪಕ್ಕದ ಮನೆಯೂ ಕುಸಿದು ಹೋಗಿದೆ. ಸುಬಾನಿ ಸಾಬ್ ಸೇರಿದಂತೆ ಇನ್ನಿಬ್ಬರಿಗೆ ಗಾಯವಾಗಿದ್ದು, ತೊರಣಗಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತೋರಣಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಿಂದ ವಿದೇಶಕ್ಕೆ ಹೊರಡಬೇಕಿದ್ದ ವಿಮಾನಗಳು ಕ್ಯಾನ್ಸಲ್ | ಪ್ರಯಾಣಿಕರ ಪರದಾಟ!



















