ತಿರುವನಂತಪುರಂ : ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡಬೇಕೋ? ಅಥವಾ ಬೇಡವೋ? ಎಂಬ ಚರ್ಚೆ ಶುರುವಾಗಿದ್ದು, 10 ರಿಂದ 50 ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ಬೇಡ ಎಂದು ಕೇರಳ ಸರ್ಕಾರವು ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಲು ನಿರ್ಧರಿಸಿದೆ.
ಸಿಪಿಎಂ ನೇತೃತ್ವದ ಎಲ್ಡಿಎಫ್ ಸರ್ಕಾರ ಈ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ. ಹಿಂದೆ 2018ರಲ್ಲಿ ಸುಪ್ರೀಂಕೋರ್ಟ್, ಮಹಿಳೆಯರ ಪ್ರವೇಶಕ್ಕೆ ಇದ್ದ ನಿರ್ಬಂಧ ತೆಗೆದುಹಾಕಿತ್ತು. ಇದನ್ನು ಸ್ವಾಗತಿಸಿದ್ದ ಅಂದಿನ ಎಲ್ಡಿಎಫ್ ಸರ್ಕಾರ ಮಹಿಳೆಯರ ಪ್ರವೇಶಕ್ಕೆ ಸಿದ್ಧತೆ ನಡೆಸಿತ್ತು. ಆದರೆ, ಈಗ ಕೇರಳದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಎಲ್ಡಿಎಫ್ ಸರ್ಕಾರ ಈ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ.
ಸುಪ್ರೀಂಕೋರ್ಟ್ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿದ್ದು, ಋತುಮತಿ ವಯಸ್ಸಿನ ಮಹಿಳೆಯರಿಗೆ ಅವಕಾಶ ನೀಡಬಾರದು. ಹಿಂದಿನ ಸಂಪ್ರದಾಯ ಪಾಲಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. ವಿಷಯ ಕೇರಳದಲ್ಲಿ ಎಡಪಕ್ಷಗಳು, ಕಾಂಗ್ರೆಸ್, ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಈ ಮಧ್ಯೆ ಸುಪ್ರೀಂಕೋರ್ಟ್ ಕೇರಳ ಸರ್ಕಾರದ ಅಭಿಪ್ರಾಯ ಕೇಳಿತ್ತು.
ತನ್ನ ಹಳೆಯ ನಿಲುವಿನಿಂದ ಹಿಂದೆ ಸರಿದು, ಮಹಿಳೆಯರಿಗೆ ಪ್ರವೇಶ ಬೇಡ ಎಂಬ ಸಲಹೆಯನ್ನು ಸುಪ್ರೀಂಕೋರ್ಟ್ಗೆ ನೀಡಲು ದೇಗುಲದ ಉಸ್ತುವಾರಿ ಹೊತ್ತಿರುವ ಸರ್ಕಾರದ ಅಧೀನ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ನಿರ್ಧರಿಸಿದೆ. ಈ ಬಗ್ಗೆ ಮಂಡಳಿಯ ಸಭೆಯಲ್ಲಿ ಅಂಗೀಕಾರ ಕೈಗೊಂಡು, ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದರ ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ | ಇಬ್ಬರು ಲಾಕ್!



















