ಹಾಸನ : ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಕಾರು ಗುದ್ದಿಸಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು (27) ಎಂದು ಗುರುತಿಸಲಾಗಿದೆ. ಕಾರು ಗುದ್ದಿಸಿದವನು ಅಲ್ಲಿಂದ ಪರಾರಿಯಾಗಿದ್ದಾನೆ.
ನಡುರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ KA-01-ಎಂಎಫ್-2883 ನಂಬರ್ನ ಕಾರಿನಲ್ಲಿ ಅತಿ ವೇಗವಾಗಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾನೆ.
ಡಿಕ್ಕಿಯ ರಭಸಕ್ಕೆ ಮನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಭಿಷೇಕ್ ಸೇರಿ ಮೂವರು ಯುವಕರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ವರು ಯುವಕರು ಸಂಬಂಧಿಗಳು ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್



















