ಚಿತ್ರದುರ್ಗ: ಖಾಸಗಿ ಹೋಟೆಲ್ ನಾಮಫಲಕಕ್ಕೆ ಲಾರಿ ಗುದ್ದಿದ ಪರಿಣಾಮ ಅಕ್ಕಿ ಚೀಲಗಳು ರಸ್ತೆಯಲ್ಲಿ ಬಿದ್ದ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.
ನಗರದ ಉಪಾಧ್ಯ ಹೋಟೆಲ್ ಮುಂಭಾಗ ಈ ಘಟನೆ ನಡೆದಿದ್ದು, ಚಿತ್ರದುರ್ಗದಿಂದ ಅಕ್ಕಿ ತುಂಬಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಹೋಟೆಲ್ನ ನಾಮಫಲಕಕ್ಕೆ ಗುದ್ದಿದೆ. ಡಿಕ್ಕಿಯ ಪರಿಣಾಮ ಲಾರಿಯಲ್ಲಿದ್ದ ಅಕ್ಕಿ ಚೀಲಗಳು ರಸ್ತೆಯ ಮೇಲೆ ಬಿದ್ದಿವೆ.
ಘಟನೆ ಬಳಿಕ ಲಾರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತೆಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಚಿತ್ರದುರ್ಗದಲ್ಲಿ ಭೀಕರ ಕ್ರೌರ್ಯ.. ಮಚ್ಚಿನಿಂದ ಕೊಚ್ಚಿ ರಕ್ತ ಹರಿಸಿದ ಕೀಚಕ!



















