ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ನಿಷೇಧಿತ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಪೊಲೀಸರ ಕಣ್ಗಾವಲಿನಲ್ಲಿಯೇ ಮರಳು ಮಾಫಿಯಾ ಅಟ್ಟಹಾಸ ಮೆರೆದಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಶಿಡ್ಲಘಟ್ಟ ತಾಲೂಕಿನ ಏನಿಗದಲೆ ಗ್ರಾಮದ ಸುತ್ತಮುತ್ತ ಪ್ರದೇಶಗಳಲ್ಲಿ ಮರಳು ದಂಧೆಕೋರರು ನಿರಂತರವಾಗಿ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ ರಾತ್ರಿ ವೇಳೆಯಾಗುತ್ತಿದ್ದಂತೆ ಮರಳು ದಂಧೆ ಜೋರಾಗುತ್ತದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನಿಷೇಧ ಇದ್ದರೂ ಸಹ ಮರಳು ದಂಧೆ ನಿರಂತರವಾಗಿ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ : ಚಿತ್ರದುರ್ಗ : ಹೋಟೆಲ್ ನಾಮಫಲಕಕ್ಕೆ ಗುದ್ದಿದ ಲಾರಿ : ಅಕ್ರಮ ಅಕ್ಕಿ ಸಾಗಾಟ ಶಂಕೆ



















