ಬಳ್ಳಾರಿ : ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ. ಜಿ.ಎನ್. ರಾಜು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆ ನೌಕರ.
ಸಂಡೂರು ಕೃಷಿ ಇಲಾಖೆಯ ತಾಲೂಕು ಅಧಿಕಾರಿ ರಾಘವೇಂದ್ರ ಅವರ ವಿರುದ್ದ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮೂರು ಪುಟಗಳ ಡೆತ್ನೋಟ್ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು, ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಸಂಡೂರು ಕೃಷಿ ಇಲಾಖೆ ಅಧಿಕಾರಿ ರಾಘವೇಂದ್ರ ಅವರು ರಾಜು ಅವರಿಗೆ ಕೆಲಸಕ್ಕೆ ಸೇರಿದ ದಿನದಿಂದಲೇ ಮಾನಸಿಕ ಕಿರುಕುಳ ನೀಡುತ್ತಿದ್ದರು. ಕಚೇರಿಯಲ್ಲಿನ ಕಿರುಕುಳದ ಬಗ್ಗೆ ಮೃತ ರಾಜು ಪತ್ನಿ ಪ್ರೇಮಾ ಅವರ ಮುಂದೆ ಹೇಳಿಕೊಂಡಿದ್ದರು. ದಿನ ನಿತ್ಯ ಕೆಲಸಕ್ಕೆ ಹೋದ್ರು ರಾಘವೇಂದ್ರ ಅವರು ತನ್ನನ್ನು ಮಾತನಾಡಿಸುತ್ತಿರಲಿಲ್ಲ. ಯಾವುದೇ ಕೆಲಸ ಮಾಡು ಅಂತ ಹೇಳುತ್ತಿರಲಿಲ್ಲ. ಕಳೆದ ನಾಲ್ಕು ತಿಂಗಳುಗಳಿಂದ ಸಂಬಳ ಸಹ ಬಂದಿರಲಿಲ್ಲವಂತೆ. ಹಿರಿಯ ಅಧಿಕಾರಿಗಳು ಹೇಳಿದ್ರು ನನ್ನ ಗಂಡನಿಗೆ ಸಂಬಳ ಕೊಡದೇ ಕಿರುಕುಳ ನೀಡುತ್ತಿದ್ದರು ಎಂದು ಮೃತ ರಾಜು ಪತ್ನಿ ಪ್ರೇಮಾ ಅವರು ಅರೋಪಿಸಿದ್ದಾರೆ.
ಇದನ್ನೂ ಓದಿ : ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!



















