ಬೆಂಗಳೂರು | ನಗರದ ವಿಠ್ಠಲ್ ಮಲ್ಯ ರೋಡ್ನಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಶೆಲ್ ಪೆಟ್ರೋಲ್ ಬಂಕ್ ಮುಂದೆ ಈ ಅಪಘಾತ ನಡೆದಿದ್ದು, ಸ್ಥಳದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೈಕ್ ಸವಾರನು ಕಾರಿನ ಬಂಪರ್ಗೆ ಗುದ್ದಿದ ಪರಿಣಾಮ, ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿ ಮುಖದಲ್ಲಿ ರಕ್ತಸ್ರಾವವಾಗಿದೆ.
ಅಪಘಾತದ ಬಳಿಕ ಕಾರಿನ ಮಾಲೀಕರಾಗಿರುವ ಮಹಿಳೆ, ನಡು ರಸ್ತೆಯಲ್ಲೇ ನಿಂತು ಬೈಕ್ ಸವಾರನ ಮೇಲೆ ಅವಾಚ್ಯ ಪದಗಳಿಂದ ನಿಂದಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ ಪರಿಸ್ಥಿತಿ ಶಮನಗೊಳಿಸಲು ಪ್ರಯತ್ನಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ



















