ಕಲಬುರಗಿ : ರೈತರ ಜಮೀನಿನಲ್ಲಿದ್ದ ವಸ್ತುಗಳು ಕಳ್ಳತನಕ್ಕೆ ಬಂದು, ರೈತರ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಓರ್ವ ಕಳ್ಳನ್ನು ಗ್ರಾಮಸ್ಥರು ಹಿಡಿದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
ಐನಾಪುರ ಗ್ರಾಮದ ತೌಫಿಕ್ ಎಂಬಾತನ ಮೇಲೆ ಕಳ್ಳನೊಬ್ಬ ಕೊಡಲಿಯಿಂದ ಹಲ್ಲೆ ಮಾಡಲು ಮುಂದಾಗಿದ್ದ, ವೇಳೆ ಆತನ ಹೆಬ್ಬೆರಳಿಗೆ ಗಾಯವಾಗಿದೆ ಎನ್ನಲಾಗಿದೆ.
ನಿನ್ನೆ ತಡರಾತ್ರಿ ಐನಾಪುರ ಗ್ರಾಮಕ್ಕೆ ನುಗ್ಗಿದ ಕಳ್ಳರ ಗ್ಯಾಂಗ್ವೊಂದು ಹೊಲದಲ್ಲಿನ ಕೃಷಿ ಪರಿಕರಗಳಾದ ಪಂಪ್ಸೆಟ್, ಕೇಬಲ್, ಶ್ರೀಗಂಧ ಮರ ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ಗ್ರಾಮಸ್ಥರು ಓರ್ವ ಕಳ್ಳನನ್ನ ಹಿಡಿದು ಗ್ರಾಮದಲ್ಲೆ ಕಟ್ಟಿ ಹಾಕಿದ್ದಾರೆ. ಮತ್ತೊಬ್ಬ ಕಳ್ಳ ಎಸ್ಕೇಪ್ ಆಗಿದ್ದಾನೆ.
ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ರವಾಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನಾ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಆಯುಷ್ ಇಲಾಖೆಯಲ್ಲಿ ಅಕೌಂಟ್ ಅಸಿಸ್ಟಂಟ್ ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ



















