ಹುಬ್ಬಳ್ಳಿ: ಎಲ್ಪಿಜಿ ಅಭಾವದ ನಡುವೆಯೇ ಸಿಲಿಂಡರ್ ಹೊತ್ತ ವಾಹನದಿಂದ ಅಪಾರ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ
ಧಾರವಾಡ ಜಿಲ್ಲೆಯ ಕಲಘಟಗಿಯ ಬಳಿ ನಡೆದಿದೆ.
ಗುತ್ತಿ – ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ತಂಬೂರು ಕ್ರಾಸ್ ಬಳಿ ನಿನ್ನೆಯಿಂದಲೇ ಗ್ಯಾಸ್ ಸೋರಿಕೆಯಾಗುತ್ತಿದೆ. ಗ್ಯಾಸ್ ಸೋರಿಕೆ ಹಿನ್ನೆಲೆ ಕಲಘಟಗಿ ಯಲ್ಲಾಪುರ ರಸ್ತೆ ಮಾರ್ಗ ಬದಲಾವಣೆ ಮಾಡಿ, ಹುಬ್ಬಳ್ಳಿ ತಡಸ ಕ್ರಾಸ್ ಮುಂಡಗೋಡ ಮಾರ್ಗವಾಗಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.
ವಾಹನಗಳ ಓಡಾಟಕ್ಕೆ ಸಂಪೂರ್ಣ ನಿಷೇಧ ಹೇರಿರುವ ಪೊಲೀಸರು, ಗ್ಯಾಸ್ ಸೋರಿಕೆಯಾಗುತ್ತಿರುವ ಕಾರಣಕ್ಕೆ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಿದ್ದಾರೆ. ಸ್ಥಳದಲ್ಲೇ ಅಗ್ನಿ ಶಾಮಕದಳ ಮತ್ತು ಕಲಘಟಗಿ ಪೋಲೀಸರು ಬೀಡು ಬಿಟ್ಟಿದ್ದಾರೆ.
ಇದನ್ನೂ ಓದಿ : ಹಾಸನ : ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯ ಶವ ಪತ್ತೆ..!



















