ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಟ್ರಾಕ್ಟರ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಟರ್ ಛಿದ್ರ ಛಿದ್ರವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44ರ ರಾಮದೇವರಗುಡಿ ಬಳಿ ನಡೆದಿದೆ.
ಭೀಕರ ಅಪಘಾತದಲ್ಲಿ ಟ್ರಾಕ್ಟರ್ ತುಂಡು ತುಂಡಾಗಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಟ್ರಾಕ್ಟರ್ ಚಲಿಸುತ್ತಿದ್ದ ವರ್ಷಿತ್ಗೆ ಸಣ್ಣ ಪುಟ್ಟ ಗಾಯವಾಗಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಪಾತೂರು ಗ್ರಾಮದ ಜನಾರ್ದನ್ಗೆ ಸೇರಿದ ಟ್ರಾಕ್ಟರ್ ಹಾಗೂ ಕಣಿವೆನಾರಾಯಣಪುರದ ಪಿಳ್ಳಪ್ಪ ಎನ್ನುವವರಿಗೆ ಸೇರಿದ ಟಿಪ್ಪರ್ ಲಾರಿ. ಆಲೂಗಡ್ಡೆ ತುಂಬಿಸಿಕೊಂಡು ಕೋಲ್ಡ್ ಸ್ಟೋರೇಜ್ಗೆ ಹೋಗುತಿದ್ದ ವೇಳೆ ದುರ್ಘಟನೆ ನಡೆದಿದೆ.
ಅತಿ ವೇಗದಿಂದ ಬಂದು ಟಿಪ್ಪರ್, ಟ್ರಾಕ್ಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಟಿಪ್ಪರ್ ಲಾರಿಗಳ ಅತಿ ವೇಗಕ್ಕೆ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಜೊತೆಗೆ ಟಿಪ್ಪರ್ ಲಾರಿಗಳ ಹಾವಳಿಗೆ ಹಲವಾರು ಬಲಿಯಾಗಿದ್ದಾರೆ.
ಟಿಪ್ಪರ್ ಲಾರಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುವಂತ ಸ್ಥಳೀಯರು ಆಗ್ರಹಿಸಿದ್ದಾರೆ. ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಬರ್ತ್ ಡೇ ಪಾರ್ಟಿಗೆ ತೆರಳಿದ್ದ ರೌಡಿಶೀಟರ್ ಅನುಮಾನಾಸ್ಪದ ಸಾವು



















