ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ಪ್ರತಿ ಬಾರಿ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ರು ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಹಾಗಾಗಿ ಈ ಬಾರಿ ಬದಲಾವಣೆ ಮಾಡಬೇಕು ಎಂದು ಹಣ ಬಲ ತೋಳ್ಬಲವನ್ನು ಲೆಕ್ಕಿಸದೇ ಎನ್ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ನಿರ್ಧಾರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿ ಪರ ಮತಭೇಟೆಗೆ ಇಳಿದ ಬಿವೈ ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಇಡೀ ರಾಜ್ಯದ ಗಮನವನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಸೆಳೆದಿದೆ. ಈ ಎರಡು ಉಪಚುನಾವಣೆಗಳು ರಾಜ್ಯದಲ್ಲಿ ಭಾರೀ ಸುದ್ದಿ ಮಾಡುತ್ತಿದ್ದು, ರಾಜ್ಯದ ರಾಜಕಾರಣದ ಧಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿ ಇದೆ ಎಂದಿದ್ದಾರೆ.
ಸಾಮಾನ್ಯ ವರ್ಗಕ್ಕೆ ಸೇರಿದ ಶ್ರೀನಿವಾಸ್ ದಾಸ್ ಕರಿಯಪ್ಪ ಗೆಲ್ಲಿಸಿದರೆ ಎಲ್ಲಾ ವರ್ಗಗಳಿಗೆ ನ್ಯಾಯ ಸಿಗುತ್ತದೆ. ಸಾಕಷ್ಟು ಗೊಂದಲಗಳು ಇದ್ದರೂ ಸಹ ಅಭ್ಯರ್ಥಿ ಘೋಷಣೆ ನಂತರ ಎಲ್ಲರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದು ಇಡೀ ರಾಜ್ಯಕ್ಕೆ ಒಗ್ಗಟ್ಟಿನ ಸಂದೇಶವನ್ನು ನೀಡಿದ್ದಾರೆ. ನಮಗೆ ಸಂಪೂರ್ಣ ವಿಶ್ವಾಸ ಇದೆ ಈ ಬಾರಿ ಉಪಚುನಾವಣೆ ಶ್ರೀನಿವಾಸ್ ದಾಸ್ ಕರಿಯಪ್ಪ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅಲ್ಪಸಂಖ್ಯಾತರಿನ್ನೂ ಕೂಡ ಮತಬ್ಯಾಂಕ್ ಆಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗೊತ್ತಾಗಿದೆ. ಸಿದ್ದರಾಮಯ್ಯನವರು 17ನೇ ದಾಖಲೆಯ ಬಜೆಟ್ ಮಂಡನೆಗಳು ಮಾಡಿದ್ದಾರೆ. ಈ ದಾಖಲೆ ಬಜೆಟ್ ಗಳು ರಾಜ್ಯಕ್ಕೆ ಯಾವುದೇ ಉಪಯೋಗವಾಗಿಲ್ಲ.ಪಂಚ ರಾಜ್ಯದ ಚುನಾವಣೆ ನಂತರ ಹೈಕಮಾಂಡ್ ಮಾತು ಕೇಳಬೇಕಾದ ಪರಿಸ್ಥಿತಿ ಸಿಎಂಗೆ ಇದೆ ಎಂದು ಮೊನ್ನೇ ಅವರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿತ್ತು ಎಂದು ಹೇಳಿದ್ದಾರೆ.
ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸ ಇದೆ. ದೇಶದ ಅಭಿವೃದ್ಧಿಯತ್ತ ಸಾಗಬೇಕು ಎಂದರೆ ಎಲ್ಲಾರೂ ಕೈಜೊಡಿಸಬೇಕು ಎಂದು ಪ್ರಧಾನಿಗಳು ಹೇಳಿದ್ದಾರೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಮುಸ್ಲಿಂರಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರ ಅಭಿವೃದ್ಧಿಯಾಗಿದೆ ಎಂದರೆ ಅದು ಬಿಜೆಪಿಯಿಂದ ಎಂದು ಹೇಳಿದ್ದಾರೆ.
ಇನ್ನು, ಹೊಂದಾಣಿಕೆ ರಾಜಕಾರಣದಿಂದ ದಾವಣಗೆರೆಯಲ್ಲಿ ಸೋಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಯತ್ನಾಳ್ ಆರೋಪದ ಬಗ್ಗೆ ಮಾತನಾಡಿ ನಾನು ರಾಜ್ಯದ ಅಧ್ಯಕ್ಷನಾಗಿ ಸಾಕಷ್ಟು ಕೆಲಸಗಳು ಇವೆ. ಕೊಂಕು ಮಾತಿಗೆ ಕೊರಗುವುದು ಏಕೆ ಎಂದು ನಂಬಿದವನು ನಾನು, ಯಾರ ಮಾತಿಗೂ ಕೂಡ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಯತ್ನಾಳ್ಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ – ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ


















