ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕ ತಿರುಪತಿ ಜಾತ್ರೆ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಿಲ್ಲಿ ನಟನ ನೋಡಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
ಮಾಜಿ ಶಾಸಕ ಮಂಜುನಾಥಗೌಡ ಆಯೋಜಿಸಿದ್ದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಗಿಲ್ಲಿ ಭಾಗವಹಿಸಿದ್ದು, ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಮುಗಿಬಿದೊದ್ದಾರೆ. ಚಿಕ್ಕ ತಿರುಪತಿ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಸಾಗರವೇ ಕಾಣಿಸಿಕೊಂಡಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಿಲ್ಲಿ ನಟ ತಮ್ಮ ಹಾಸ್ಯ ಚಟಾಕಿಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ವಿಶೇಷವಾಗಿ ಮಹಿಳಾ ಅಭಿಮಾನಿಗಳನ್ನು ಉದ್ದೇಶಿಸಿ ಹಾಸ್ಯವಾಗಿ ಮಾತನಾಡಿ, “ನಮ್ಮ ಗಂಡು ಮಕ್ಕಳಿಗೆ ಬಸ್ನಲ್ಲಿ ಸೀಟ್ ಸಿಕ್ಕಲ್ಲ, ಕಾರ್ಯಕ್ರಮದಲ್ಲೂ ಸೀಟ್ ಸಿಕ್ಕಲ್ಲ” ಎಂದು ಕಿಚಾಯಿಸಿದ್ದಾರೆ. ಈ ವೇಳೆ ವೇದಿಕೆಯ ಮುಂದೆ ನೂರಾರು ಮಹಿಳಾ ಪ್ರೇಕ್ಷಕರು ಕುಳಿತಿದ್ದು, ಕಾರ್ಯಕ್ರಮಕ್ಕೆ ಇನ್ನಷ್ಟು ಉತ್ಸಾಹ ತುಂಬಿತು.
ಇದೇ ವೇಳೆ ಅಭಿಮಾನಿಗಳಿಗಾಗಿ ಡೈಲಾಗ್ ಹೊಡೆದು ಗಿಲ್ಲಿ ನಟ ಮನರಂಜನೆ ನೀಡಿದ್ದಾರೆ. ಕಾರ್ಯಕ್ರಮದ ವೇಳೆ ಮಾಜಿ ಶಾಸಕ ಮಂಜುನಾಥಗೌಡ ಗಿಲ್ಲಿಗೆ ಬೇಗ ಮದುವೆಯಾಗಲಿ ಎಂದು ಹಾರೈಸಿದ್ದಾರೆ. ಇದಕ್ಕೆ ಅಭಿಮಾನಿಗಳು “ಕಾವು ಕಾವು” ಎಂದು ಕಿಚಾಯಿಸಿದ್ದಾರೆ.
ಚಿಕ್ಕತಿರುಪತಿ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿ, ಗಿಲ್ಲಿ ನಟನ ಉಪಸ್ಥಿತಿಯಿಂದ ಕಾರ್ಯಕ್ರಮ ಹಬ್ಬದ ವಾತಾವರಣ ಪಡೆದಿದೆ.


















