ಬೆಂಗಳೂರು ಗ್ರಾಮಾಂತರ : ಪಾನಿಪುರಿ ತಿನ್ನುತ್ತಿದ್ದ ಯುವತಿಯ ಮೇಲೆ ಕಲ್ಲು ಎಸೆದ ಆರೋಪ ಕೇಳಿ ಬಂದಿದ್ದು, ಸ್ಥಳೀಯರು ಆರೋಪಿಗೆ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ಯುವತಿಯು ಒಬ್ಬಳೆ ಪಾನಿಪುರಿ ತಿನ್ನುತ್ತಿದ್ದ ವೇಳೆ, ಹಿಂಬದಿಯಿಂದ ಯಾರೋ ಕಲ್ಲು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಆತಂಕಗೊಂಡ ಯುವತಿ ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾಳೆ.
ಯುವತಿಯ ಮಾಹಿತಿ ಮೇರೆಗೆ ಸ್ಥಳೀಯರು ಆರೋಪಿಯನ್ನು ಹಿಡಿದು ಗೂಸಾ ನೀಡಿದ್ದಾರೆ. ಆರೋಪಿಯಾಗಿರುವ ಹೊರ ರಾಜ್ಯದ ವ್ಯಕ್ತಿ, “ನಾನು ಏನೂ ಮಾಡಿಲ್ಲ” ಎಂದು ಹೇಳಿಕೊಂಡಿದ್ದಾನೆ. ನೆನ್ನೆ ಸಂಜೆ ನಡೆದ ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ಸಿಲಿಂಡರ್ ಕೊರತೆ ನಡುವೆ ಸರ್ವರ್ ಸಮಸ್ಯೆ



















