ಕೊಪ್ಪಳ : ಗಲ್ಫ್ ರಾಷ್ಟ್ರಗಳಲ್ಲಿ ಯುದ್ದ ಹಿನ್ನಲೆಯಲ್ಲಿ ಆಟೋ ಗ್ಯಾಸ್ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಆರನೇಯ ಗ್ಯಾರಂಟಿಯಾಗಿ ಅಟೋ ಚಾಲಕರಿಗೆ ತಿಂಗಳಿಗೆ ಹದಿನೈದು ಸಾವಿರ ರೂಪಾಯಿ ನೀಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಕೊಪ್ಪಳದ ಹಿಟ್ನಾಳ ಟೋಲ್ ಗೇಟ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಎರಡೂ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು,ಇದೇ ವೇಳೆ ಗಲ್ಫ್ ರಾಷ್ಟ್ರಗಳಲ್ಲಿ ಯುದ್ದ ಹಿನ್ನಲೆಯಲ್ಲಿ ಅಟೋ ಗ್ಯಾಸ್ ಸಿಗುತ್ತಿಲ್. ಹಾಗಾಗಿ, ರಾಜ್ಯ ಸರ್ಕಾರ ಆರನೆಯ ಗ್ಯಾರಂಟಿಯಾಗಿ ಅಟೋ ಚಾಲಕರಿಗೆ ತಿಂಗಳಿಗೆ ಹದಿನೈದು ಸಾವಿರ ರೂಪಾಯಿ ಕೊಡಿ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅಡುಗೆ, ಅಟೋ ಗ್ಯಾಸ್ ಸಮಸ್ಯೆ ಕಾಣುತ್ತಿದೆ. ಯುದ್ದ ನಂತರ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನರೇಂದ್ರ ಮೋದಿಯವರ ನೇತ್ರತ್ವದ ಸರಕಾರ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದೆ ಆದರೆ ಕಾಂಗ್ರೆಸ್ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : “ಗಂಭೀರ್ ಏನೋ ಸರಿಯಾದದ್ದನ್ನೇ ಮಾಡುತ್ತಿದ್ದಾರೆ” – ಟೀಮ್ ಇಂಡಿಯಾ ಕೋಚ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!



















