ಬೆಂಗಳೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಕ್ರೂರವಾಗಿ ಕೊಲೆಗೈದ ಘಟನೆ ಬಳಗೆರೆ ಮುಖ್ಯರಸ್ತೆಯ ಸ್ಕಂದ ಎಲಿನಾ ಅಪಾರ್ಟ್ಮೆಂಟ್ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ನಡೆದಿದೆ.
ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ. ದಲಾ ರಾಮ್ ಎಂಬಾತ ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದು, ಅಪರಿಚಿತ ವ್ಯಕ್ತಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಘಟನೆಯ ಮಾಹಿತಿ ಪಡೆದ ವರ್ತೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೈದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ : ಸಲೂನ್ನಲ್ಲಿ ಕೆಲಸ ಮಾಡ್ತಿದ್ದ ಬ್ಯೂಟಿಷಿಯನ್ಗೆ ಪ್ರಪೋಸ್ : ಮಾಲೀಕನ ಮೇಲೆ ಪತಿ ಗ್ಯಾಂಗ್ ಅಟ್ಯಾಕ್!



















