ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿ ಗೇಟ್ ಬಳಿ ಇರುವ ಕಸ ವಿಲೇವಾರಿ ಘಟಕದ ವಿವಾದ ಭುಗಿಲೆದ್ದಿದ್ದು, ಪೌರಾಯುಕ್ತೆ ಅಮೃತಾ ಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಕಸ ವಿಲೇವಾರಿ ಘಟಕದಿಂದ ಆರೋಗ್ಯ ಹದಹೆಡುತ್ತಿದೆ. ಹಾಗಾಗಿ ಕೂಡಲೇ ಕಸ ವಿಲೇವಾರಿ ಘಟಕ ಸ್ಥಳಾಂತರಿಸುವಂತೆ ಕಳೆದ ಹತ್ತು ವರ್ಷಗಳಿಂದ ಮನವಿ ಸಲ್ಲಿಸಿದರು ನೋ ಯೂಸ್ ಎಂದು ಗ್ರಾಮಸ್ಥರು ಇಂದು ಕಸ ವಿಲೇವಾರಿ ವಾಹನಗಳನ್ನು ರಸ್ತೆಯಲ್ಲಿಯೇ ತಡೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಡೀ ಗ್ರಾಮದ ಗ್ರಾಮಸ್ಥರು ರೇಷ್ಮೆ ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದು, ಇದೀಗ ಕಸ ವಿಲೇವಾರಿ ಹೊಗೆಯಿಂದ ರೇಷ್ಮೆ ಬೆಳೆಯಲು ಸಾಧ್ಯವಾಗುತ್ತಿಲ್ಲ ಹಾಗೂ ಕೆಟ್ಟ ಹೊಗೆಯಿಂದ ಅಸ್ತಮಾ, ಉಸಿರಾಟದ ತೊಂದರೆಯಿಂದ ಆರೋಗ್ಯ ಹದಗೆಡುತ್ತಿದೆ ಎಂದು ಆರೋಪಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಶಾಸಕ ರವಿಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಬರ್ತ್ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ಸೇರಿ 14 ಮಂದಿ ಅರೆಸ್ಟ್!



















