ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಮನನೊಂದ ಪ್ರಿಯಕರನೂ ನೇಣಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ನಡೆದಿದೆ.
ಪವಿತ್ರಾ ಒಂಟಿ (19) ಮತ್ತು ಕಾರ್ತಿಕ್ ನಾಯಕ್ (19) ಮೃತ ಪ್ರೇಮಿಗಳಾಗಿದ್ದಾರೆ. ಪವಿತ್ರಾ ಬನಹಟ್ಟಿಯ ಕೆಎಚ್ಡಿಸಿ ಕಾಲೋನಿ ನಿವಾಸಿಯಾಗಿದ್ದು, ಕಾರ್ತಿಕ್ ಅಸ್ಕಿ ಗ್ರಾಮದವನಾಗಿದ್ದಾನೆ.
ಮಂಗಳವಾರ ಇವರಿಬ್ಬರ ಮಧ್ಯೆ ವೈಮನಸ್ಸಿನಿಂದ ಜಗಳ ನಡೆದಿದ್ದು, ಇದರಿಂದ ಮನನೊಂದ ಪವಿತ್ರಾ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದ ನಂತರ ದುಃಖದಿಂದ ಕಾರ್ತಿಕ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಸಾವು



















