ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿಯೇ ಅನ್ನಭಾಗ್ಯ ಯೋಜನೆಯ ಅಕ್ಕಿ ದುರುಪಯೋಗ ಪ್ರಕರಣಗಳು ನಿಲ್ಲದಂತಾಗಿದ್ದು, ಮತ್ತೆ ಭಾರೀ ಪ್ರಮಾಣದ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಮನೆ ಮನೆಗೆ ತೆರಳಿ ಸಂಗ್ರಹಿಸಿದ್ದ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಆಟೋವನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸುಮಾರು 15 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಈ ಘಟನೆಗೆ ಮುನ್ನ ಗಂಗಾವತಿಯಲ್ಲಿ ಕೂಡ ಒಂದು ಲಾರಿಯಲ್ಲಿ ಸಾಗಾಟ ಮಾಡಲಾಗುತ್ತಿದ್ದ ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿತ್ತು. ಆದರೂ ಈ ಅಕ್ರಮ ದಂಧೆ ಕಡಿಮೆಯಾಗದಿರುವುದು ಗಮನಾರ್ಹವಾಗಿದೆ.
ನಿರಂತರವಾಗಿ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆ, ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ನಭಾಗ್ಯ ಅಕ್ಕಿ ಕಳ್ಳ ಸಾಗಾಟವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಪಾರ್ಕಿಂಗ್ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ



















