ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರ ಭಾವಚಿತ್ರ ಮತ್ತು ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಅನಾಮಿಕ ವ್ಯಕ್ತಿಯೊಬ್ಬ ತನ್ನ ವಾಟ್ಸ್ಆ್ಯಪ್ ಖಾತೆಯಲ್ಲಿ ಮಹೇಶ್ವರ ರಾವ್ ಅವರ ಫೋಟೋ ಬಳಸಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ (MD) ಎಂಬ ಹುದ್ದೆಯ ಹೆಸರನ್ನೂ ಬಳಸಿಕೊಂಡಿದ್ದಾನೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ.

ಈ ವಿಷಯ ತಮ್ಮ ಗಮನಕ್ಕೆ ಬಂದ ತಕ್ಷಣ, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಅವರು ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ. ಪ್ರಕರಣ ದಾಖಲಾಗಿ ತನಿಖೆ ನಡೆಯುವ ಸಾಧ್ಯತೆ ಇದೆ.
ಈ ರೀತಿಯ ಘಟನೆ ಇದು ಮೊದಲ ಬಾರಿಯಲ್ಲ. ಈ ಹಿಂದೆ ಕೂಡ ತುಷಾರ್ ಗಿರಿನಾಥ್ ಅವರು ಬಿಬಿಎಂಪಿ ಆಯುಕ್ತರಾಗಿದ್ದ ಸಂದರ್ಭದಲ್ಲಿ, ಅವರ ಭಾವಚಿತ್ರವನ್ನು ಬಳಸಿಕೊಂಡು ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿತ್ತು. ಆ ಪ್ರಕರಣದಲ್ಲಿಯೂ ಸೈಬರ್ ಕ್ರೈಮ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಸಾರ್ವಜನಿಕರಿಗೆ ಎಚ್ಚರಿಕೆ: ಅಧಿಕಾರಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಖಾತೆಗಳನ್ನು ನಂಬುವ ಮುನ್ನ ಪರಿಶೀಲನೆ ಮಾಡುವುದು ಅಗತ್ಯ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ವಿವಾಹಿತೆ ಬ್ಲ್ಯಾಕ್ಮೇಲ್? ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್


















