ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದಲ್ಲಿ ಸರ್ಕಾರ ಬಡವರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಗೆ ತಲುಪಿಸಲು ಅಕ್ರಮವಾಗಿ ಸಂಗ್ರಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದಾಗ ಸುಮಾರು 11 ಕ್ವಿಂಟಲ್ ಅಕ್ಕಿಯನ್ನು ಅನುಮಾನಾಸ್ಪದವಾಗಿ ಸಂಗ್ರಹಿಸಿರುವುದು ಪತ್ತೆಯಾಗಿದ್ದು, ಅಕ್ರಮವಾಗಿ ಇಟ್ಟುಕೊಂಡಿದ್ದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.
ಸರ್ಕಾರದ ಪಡಿತರವನ್ನು ದುರುಪಯೋಗಪಡಿಸಿಕೊಂಡು ಕಾಳಸಂತೆ ನಡೆಸುವ ಜಾಲದ ಕುರಿತು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮೀಣ ಭಾಗಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವುದರಿಂದ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬಡವರಿಗೆ ನೀಡುವ ಆಹಾರ ಧಾನ್ಯಗಳು ಸರಿಯಾದ ಫಲಾನುಭವಿಗಳಿಗೆ ತಲುಪಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಇದನ್ನೂ ಓದಿ: ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ



















