ಬೆಳಗಾವಿ: ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ ಇದ್ದ ಹಾಗೇ. ಕಾನೂನು ಸುವ್ಯವಸ್ಥೆ ಚನ್ನಾಗಿ ಇದ್ದರೆ ಅದು ರಾಜ್ಯದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅಭಿಪ್ರಾಯ ಪಟ್ಟಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಗೋಕಾಕ್, ಕುಲಗೋಡು, ಸಂಕೇಶ್ವರದಲ್ಲಿ ಒಟ್ಟು 67 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್, 3 ಕೋಟಿ 92ಲಕ್ಷ ವೆಚ್ಚದಲ್ಲಿ ಶಹಾಪುರ ಪೊಲೀಸ್ ಠಾಣೆಯ 12 ವಸತಿ ಗೃಹವನ್ನು ಇಂದು ಉದ್ಘಾಟಿಸಲಾಗಿದ್ದು, ಇದರಿಂದ ಬೆಳಗಾವಿ ನಗರದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗಳಿಗೆ ಕ್ವಾಟ್ಟರ್ಸ್ ವ್ಯವಸ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಶೇ 40 ರಷ್ಟು ಸಿಬ್ಬಂದಿಗೆ ವಸತಿ ಗೃಹ ಒದಗಿಸಲಾಗಿದ್ದು, ಡಬಲ್ ಬೆಡ್ ರೂಂ ಮನೆಗಳನ್ನು ಬಹಳ ಚನ್ನಾಗಿ ಕಟ್ಟಿದ್ದಾರೆ. ಒಂದು ಯುನಿಟ್ ಗೆ 38ಲಕ್ಷ ರೂಪಾಯಿ ಖರ್ಚು ಮಾಡಿದ್ದೇವೆ. ಸಿಬ್ಬಂದಿ ತಮ್ಮ ಕುಟುಂಬದೊಂದಿಗೆ ಸಂತೋಷದಿಂದ ಇರಬಹುದು. ಕಳೆದ ವರ್ಷ ಸಿಎಂ 2 ಸಾವಿರ ಕೋಟಿ ಅನುದಾನವನ್ನು ಕೋಟಿದ್ರು. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ ಪೊಲೀಸ್ ಇಲಾಖೆ ಸವಲತ್ತು ಹೆಚ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇಂಡಿಯಾ ಜಸ್ಟಿಸ್ ರಿಪೋರ್ಟ್ ಪ್ರಕಾರ ಕಳೆದ ವರ್ಷ ನ್ಯಾಯ ಕೊಡಿಸುವುದರಲ್ಲಿ ಕರ್ನಾಟಕ ಪೊಲೀಸ್ ಪ್ರಥಮ ಸ್ಥಾನದಲ್ಲಿ ಇದೆ ಎಂದು ತಿಳಿಸಿದೆ. ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಜನ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದೇವೆ ಎಂದಿದ್ದಾರೆ.
ಕವಿತಾಳ ಪೊಲೀಸ್ ಠಾಣೆ ದೇಶಕ್ಕೆ ಮೂರನೇ ಸ್ಥಾನ ಬಂದಿದ್ದು, 1 ಸಾವಿರಕ್ಕೂ ಹೆಚ್ಚು ಠಾಣೆಗಳನ್ನು ಜನಸ್ನೇಹಿ ಕೆಲಸ ಮಾಡಲು ಪ್ರಯತ್ನ ಮಾಡಿದೆ. ಜನರ ಜೊತೆಗೆ ಅನುಚಿತವಾಗಿ ವರ್ತಿಸಿದರೆ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಕಾನೂನು ರಕ್ಷಿಸಿಲು ಏನಲ್ಲ ಸೂಚನೆ ಕೊಡಬೇಕೊ ಅದನ್ನ ನಾವು ಕೊಡ್ತಾ ಇರ್ತೆವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಕಾಳಸಂತೆ ಸೇರುತ್ತಿದ್ದ 11 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶ


















