ಹಾಸನ : ಜಿಲ್ಲೆಯ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯಸ್ವಾಮಿ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ದೇವೇಗೌಡರಿಗೆ 1990ರಲ್ಲಿ ರಾಜಕೀಯ ಶಕ್ತಿ ನೀಡಿದ ಗ್ರಾಮ ಇದಾಗಿದೆ ಎಂದು ಹೇಳಿದ ರೇವಣ್ಣ, “ಆ ಕಾರಣಕ್ಕೆ ಈ ಭಾಗದ ಅಭಿವೃದ್ಧಿಗೆ ಸುಮಾರು 450 ಕೋಟಿ ರೂ. ಕೆಲಸ ಮಾಡಿದ್ದೇನೆ, 140ಕ್ಕೂ ಹೆಚ್ಚು ದೇವಸ್ಥಾನಗಳನ್ನು ನಿರ್ಮಿಸಿದ್ದೇನೆ” ಎಂದು ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, “ಇಂತಹ ಕೆಟ್ಟ ಸರ್ಕಾರ ನಾನು ನೋಡಿಲ್ಲ” ಎಂದು ಟೀಕಿಸಿದರು. “ಬಡ್ಡಿ ಸಮೇತ ತೀರಿಸುವವರೆಗೂ ರಾಜಕೀಯದಲ್ಲಿ ಇರುತ್ತೇನೆ” ಎಂದು ಸವಾಲು ಹಾಕಿದರು.
ಹಾಸನ ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಎತ್ತಿದ ರೇವಣ್ಣ, ಕೆಲ ಅಧಿಕಾರಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮದಲ್ಲಿ ರಸ್ತೆ ವಿಷಯಕ್ಕೆ ಸಂಬಂಧಿಸಿದಂತೆ ಜನರ ಮೇಲೆ ಒತ್ತಡ ಹಾಕುತ್ತಿರುವುದಾಗಿ ಆರೋಪಿಸಿದರು.
“ನಮ್ಮ ಕಾರ್ಯಕರ್ತರು ಎಷ್ಟೇ ಕಷ್ಟ ಬಂದರೂ ಸಹಿಸಿಕೊಳ್ಳಬೇಕು. ಸಮಯ ಬಂದಾಗ ಎಲ್ಲಕ್ಕೂ ಉತ್ತರ ಕೊಡುತ್ತೇವೆ” ಎಂದು ಹೇಳಿದರು. ದೇವೇಗೌಡರ ರಾಜಕೀಯ ಜೀವನದಲ್ಲಿ ಸಂಕಷ್ಟದ ಸಮಯದಲ್ಲಿ ಬೆಂಬಲ ನೀಡಿದ ಗ್ರಾಮಗಳನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಕುಮಾರಸ್ವಾಮಿ ಸೋಲಿನ ಹಿಂದೆ ಒಳಚರಂಡಿ ರಾಜಕೀಯವಿದೆ ಎಂದು ಆರೋಪಿಸಿದರು.
ಇದನ್ನೂ ಓದಿ : ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್



















