ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಎಸ್.ಎಂ. ಕೃಷ್ಣ ನಗರದಲ್ಲಿ ನಡೆದಿದೆ. 21 ವರ್ಷದ ಸಲ್ಮಾನ್ ಮೇಲೆ ಸಿಕಂದರ್ ಎಂಬಾತ ದಾಳಿ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಅಕ್ಕಪಕ್ಕದ ಮನೆಯಲ್ಲೇ ವಾಸವಾಗಿದ್ದ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದ್ದು, ಸಲ್ಮಾನ್ ಮನೆಯತ್ತ ಇಣುಕಿ ನೋಡುತ್ತಿದ್ದಾನೆ ಎಂಬ ಕಾರಣಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಸಲ್ಮಾನ್ ಸಿಕಂದರ್ನನ್ನು ಪ್ರಶ್ನಿಸಿದ್ದಾನೆ.
ಮಾತಿನ ವಾಗ್ವಾದದ ಬಳಿಕ ಮನೆಗೆ ಹೋದ ಸಿಕಂದರ್ ಚಾಕು ತಂದು ಏಕಾಏಕಿ ಸಲ್ಮಾನ್ ಮೇಲೆ ದಾಳಿ ನಡೆಸಿ ಎದೆ ಮತ್ತು ಕೈ ಭಾಗ ಸೇರಿ ಮೂರು ಕಡೆಗಳಲ್ಲಿ ಚುಚ್ಚಿದ್ದಾನೆ. ಘಟನೆಯಲ್ಲಿ ಸಿಕಂದರ್ ಕೂಡ ಗಾಯಗೊಂಡಿದ್ದಾನೆ.
ಸದ್ಯ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಫ್ಲಿಪ್ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!



















