ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 15ನೇ ಅಪರಾಧಿ ವಿನಯ್ ಕುಲಕರ್ಣಿಯವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.
ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಪೊಲೀಸ್ ಅಧಿಕಾರಿ ಎ19 ಚೆನ್ನಕೇಶವ್ ಟೆಂಗರಿಕರ್ ಹಾಗೂ ಚಂದ್ರಶೇಖರ್ ಇಂಡಿ ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮುಗದಂ ಮತ್ತು ನ್ಯಾ.ರಾಜೇಶ್ ರೈ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು.
ಚೆನ್ನಕೇಶವ್ ಟಿಂಗರಿಕರ್ ಪರವಾಗಿ ಹಿರಿಯ ವಕೀಲ ಪಿಪಿ ಹೆಗ್ಡೆ, 7 ವರ್ಷ ಜೈಲು ಶಿಕ್ಷೆ ಆಗಿದ್ದು, ಜಾಮೀನು ನೀಡಬಹುದು ಎಂದು ಮನವಿ ಮಾಡಿದರು. ಜಾಮೀನು ನೀಡದಂತೆ ಸಿಬಿಐ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ವಾದಗಳನ್ನು ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿದೆ.
ಇದನ್ನೂ ಓದಿ : ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















