ಮೈಸೂರು: ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಬಿಳಿಗಿರಿ ಮಾದಪ್ಪನ ದೇವಾಲಯದ ಶಾಲೆ ಸಮೀಪ ಚಿರತೆ ದಾಳಿ ನಡೆಸಿ ಎರಡು ಹಸುಗಳನ್ನು ಕೊಂದ ಘಟನೆ ನಡೆದಿದೆ.
ಕಳೆದ ಎರಡು ತಿಂಗಳ ಅವಧಿಯಲ್ಲಿ ಇದೇ ಪ್ರದೇಶದಲ್ಲಿ ಮೂರನೇ ಬಾರಿ ಚಿರತೆ ದಾಳಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಪ್ರತೀ ಬಾರಿಯೂ ಚಿರತೆ ಹಸುಗಳನ್ನು ಬೇಟೆಯಾಡುತ್ತಿರುವುದರಿಂದ ಗ್ರಾಮಸ್ಥರು ಹಾಗೂ ರೈತರು ಭಯಭೀತರಾಗಿದ್ದಾರೆ.
ವಿಶೇಷವಾಗಿ ಬಿಳಿಗಿರಿ ಮಾದಪ್ಪನ ದೇವಾಲಯಕ್ಕೆ ಆಗಮಿಸುವ ಭಕ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ನಂತರ ದೇವಾಲಯದ ಸುತ್ತಮುತ್ತ ಸಂಚರಿಸಲು ಜನರು ಹೆದರುತ್ತಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ಹಲವು ಬಾರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಚಿರತೆ ಸಂಚಾರವನ್ನು ತಡೆಯಲು ಹಾಗೂ ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿ ಓರ್ವ ಸಾವು!



















